ವಿಧಾನಸೌಧಕ್ಕೆ ಇರುವ ಭದ್ರತೆ ಕೆಆರ್ ಎಸ್ ಡ್ಯಾಂಗಿಲ್ಲ: ಸುಮಲತಾ ಆಕ್ರೋಶ

Webdunia
ಮಂಗಳವಾರ, 13 ಜುಲೈ 2021 (20:16 IST)
ವಿಧಾನಸೌದಕ್ಕೆ ಇರೋ ಭದ್ರತೆ ಕೆಆರ್ ಎಸ್ ಡ್ಯಾಂಗಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಗುಡುಗಿದ್ದಾರೆ.
ಮಂಡ್ಯದಲ್ಲಿ ಕೆಆರ್ ಎಸ್ ಡ್ಯಾಂಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ ಎಸ್ ಡ್ಯಾಂ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ ಅಂತ ಅಧಿಕಾರಿಗಳು ಹೇಳುತ್ತಾರೆ. 2018ನಿಂದಲೇ ಗಣಿಗಾರಿಕೆ ನಡೆಯುತ್ತಿಲ್ಲ ಅಂತ ಸುಳ್ಳು ಮಾಹಿತಿ ಕೊಡುತ್ತಾರೆ ಎಂದರು.
ಗಣಿಗಾರಿಕೆ ವೇಳೆ ಸ್ಫೋಟ ಮಾಡಿದರೆ ಅದರಿಂದ ಕೆಆರ್ ಎಸ್ ಜಲಾಶಯಕ್ಕೆ ಹಾನಿ ಅಥವಾ ಅಪಾಯ ಇಲ್ಲ ಅಂತ ನೀವು ಪ್ರಮಾಣ ಪತ್ರ ಕೊಡುತ್ತೀರಾ ಅಂದರೆ ಇಲ್ಲ ಅಂತಾರೆ. ಎಲ್ಲರೂ ಬೇಜಾವಾಬ್ದಾರಿಯಿಂದ ಮಾತನಾಡುತ್ತಿದ್ದಾರೆ. ಮಹಾರಾಜರು ಕಟ್ಟಿದ ಜೀವನಾಡಿ ಕೆಆರ್ ಎಸ್ ಸ್ವಲ್ಪ ಹೆಚ್ಚು ಕಡಿಮೆ ಆದರೂ ನಾವ್ಯಾರೂ ಇರಲ್ಲ ಎಂದು ಸುಮಲತಾ ಆತಂಕ ವ್ಯಕ್ತಪಡಿಸಿದರು.
ಕೆಆರ್ ಎಸ್ ಡ್ಯಾಂಗೆ ಹಾನಿಯಾದರೆ ಬೆಂಗಳೂರಿನವರಿಗೆ ಕುಡಿಯುವ ನೀರು ಕೂಡ ಸಿಗಲ್ಲ. ರೈತರಂತೂ ಸತ್ತೆ ಹೊಗ್ತಾರೆ. ಹೆಚ್ಚಿನ ಭದ್ರತೆ ಒದಗಿಸಬೇಕಾದಂತ ಜಾಗದಲ್ಲಿ ಮೋಜು ಮಸ್ತಿ ಮಾಡುತ್ತಾರೆ. ಯುವಕರು ಪಾರ್ಟಿ ಮಾಡುತ್ತಾರೆ. ನಾಳೆ ದಿನ ಯಾರಾದ್ರೂ ಬಂದು ಅನಾಹುತ ಮಾಡಿದರೆ ಏನು ಮಾಡ್ತಾರೆ ಎಂದು ಅವರು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments