Webdunia - Bharat's app for daily news and videos

Install App

ಸುಮಲತಾಗೆ ಹಿಂದೆ ಮುಂದೆ ಏನು ಗೊತ್ತಿದೆ ಎಂದು ಕಿಡಿಕಾರಿದ ಸಚಿವ

Webdunia
ಶುಕ್ರವಾರ, 26 ಏಪ್ರಿಲ್ 2019 (17:40 IST)
ಎಲ್ಲದಕ್ಕೂ ದಾಖಲೆ ಇಟ್ಟುಕೊಂಡು ಮಾತನಾಡಬೇಕು. ಸುಮ್ಮನೇ ವೇಗವಾಗಿ ಮಾತನಾಡುವುದರಲ್ಲಿ ಅರ್ಥವಿಲ್ಲ. ಸುಮಲತಾಗೆ ಹಿಂದೆ ಮುಂದೆ ಏನು ಗೊತ್ತಿದೆ? ಹೀಗಂತ ಸಚಿವರೊಬ್ಬರು ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಆ ಬಳಿಕ ಮಾಧ್ಯಮ ದವರೊಂದಿಗೆ ಮಾತನಾಡಿದ್ರು.

ಹಿಂದೆ ಮುಂದೆ ಏನು ಗೊತ್ತಿದೆ? ಸಾಲ ಮನ್ನಾ ಸರಿಯಾಗಿ ಆಗಿಲ್ಲ ಎಂಬ ಸುಮಲತಾ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ್ರು. ಸಾಲ ಮನ್ನಾ ಬಗ್ಗೆ ದಾಖಲೆ ಇಟ್ಟುಕೊಂಡು ಮಾತನಾಡಬೇಕು. ಸುಮ್ಮನೆ ವೇಗವಾಗಿ ಮಾತನಾಡೋದರಲ್ಲಿ ಅರ್ಥ ಇಲ್ಲ. ಜೂನ್ ಒಳಗೆ ಸಹಕಾರಿ ಬ್ಯಾಂಕುಗಳ  ಸಂಪೂರ್ಣ ಸಾಲ ಮನ್ನಾ ಆಗಲಿದೆ. ಸರ್ಕಾರ ನಡೆಸುತ್ತಿರುವರು ನಾವು. ಸಾಲ ಮನ್ನಾ ಬಗ್ಗೆ ನಮಗೆ ಗೊತ್ತಿಲ್ವಾ..? ಅವರಿಗೆ ಹಿಂದೆ ಮುಂದೆ ಏನು ಗೊತ್ತಿದೆ..? ಎಂದು ಸುಮಲತಾ ವಿರುದ್ಧ ಕಿಡಿಕಾರಿದ್ರು.

ಚುನಾವಣೆ ನೀತಿ ಸಂಹಿತೆ ಜಾರಿಗೂ ಮೊದಲು ಸಹಕಾರಿ ಬ್ಯಾಂಕುಗಳಿಗೆ 2600 ಕೋಟಿ ಬಿಡುಗಡೆ ಆಗಿದೆ. ಅದರಲ್ಲಿ ‌2000 ಕೋಟಿ ಈಗಾಗಲೇ ರೈತರ ಅಕೌಂಟ್ ಗೆ ಹೋಗಿದೆ. ವಾಣಿಜ್ಯ ಬ್ಯಾಂಕುಗಳ 2800 ಕೋಟಿ ರೈತರ ಅಕೌಂಟ್ ಗೆ ಹೋಗಿದೆ. ಇದೆಲ್ಲಾ ಏನು ಸುಮ್ಮನೇನಾ..? ಎಂದು ಮರು ಪ್ರಶ್ನೆ ಮಾಡಿದ್ರು.

ರೈತರ ಬಗ್ಗೆ ಯಾರು ಹಗುರವಾಗಿ ಮಾತನಾಡಬಾರದು. ಸರಿಯಾದ ಅಂಕಿ ಅಂಶಗಳನ್ನು ಇಟ್ಟುಕೊಂಡು ಮಾತನಾಡಬೇಕು ಎಂದು ಸುಮಲತಾಗೆ ಪರೋಕ್ಷ ಎಚ್ಚರಿಕೆ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಬೆಳ್ತಂಗಡಿ, ಗಿರೀಶ್ ಮಟ್ಟಣ್ಣನವರ್‌, ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ಶಾಕ್‌

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

ಮುಂದಿನ ಸುದ್ದಿ
Show comments