Webdunia - Bharat's app for daily news and videos

Install App

ಸುಮಲತಾಗೆ ಹಿಂದೆ ಮುಂದೆ ಏನು ಗೊತ್ತಿದೆ ಎಂದು ಕಿಡಿಕಾರಿದ ಸಚಿವ

Webdunia
ಶುಕ್ರವಾರ, 26 ಏಪ್ರಿಲ್ 2019 (17:40 IST)
ಎಲ್ಲದಕ್ಕೂ ದಾಖಲೆ ಇಟ್ಟುಕೊಂಡು ಮಾತನಾಡಬೇಕು. ಸುಮ್ಮನೇ ವೇಗವಾಗಿ ಮಾತನಾಡುವುದರಲ್ಲಿ ಅರ್ಥವಿಲ್ಲ. ಸುಮಲತಾಗೆ ಹಿಂದೆ ಮುಂದೆ ಏನು ಗೊತ್ತಿದೆ? ಹೀಗಂತ ಸಚಿವರೊಬ್ಬರು ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಆ ಬಳಿಕ ಮಾಧ್ಯಮ ದವರೊಂದಿಗೆ ಮಾತನಾಡಿದ್ರು.

ಹಿಂದೆ ಮುಂದೆ ಏನು ಗೊತ್ತಿದೆ? ಸಾಲ ಮನ್ನಾ ಸರಿಯಾಗಿ ಆಗಿಲ್ಲ ಎಂಬ ಸುಮಲತಾ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ್ರು. ಸಾಲ ಮನ್ನಾ ಬಗ್ಗೆ ದಾಖಲೆ ಇಟ್ಟುಕೊಂಡು ಮಾತನಾಡಬೇಕು. ಸುಮ್ಮನೆ ವೇಗವಾಗಿ ಮಾತನಾಡೋದರಲ್ಲಿ ಅರ್ಥ ಇಲ್ಲ. ಜೂನ್ ಒಳಗೆ ಸಹಕಾರಿ ಬ್ಯಾಂಕುಗಳ  ಸಂಪೂರ್ಣ ಸಾಲ ಮನ್ನಾ ಆಗಲಿದೆ. ಸರ್ಕಾರ ನಡೆಸುತ್ತಿರುವರು ನಾವು. ಸಾಲ ಮನ್ನಾ ಬಗ್ಗೆ ನಮಗೆ ಗೊತ್ತಿಲ್ವಾ..? ಅವರಿಗೆ ಹಿಂದೆ ಮುಂದೆ ಏನು ಗೊತ್ತಿದೆ..? ಎಂದು ಸುಮಲತಾ ವಿರುದ್ಧ ಕಿಡಿಕಾರಿದ್ರು.

ಚುನಾವಣೆ ನೀತಿ ಸಂಹಿತೆ ಜಾರಿಗೂ ಮೊದಲು ಸಹಕಾರಿ ಬ್ಯಾಂಕುಗಳಿಗೆ 2600 ಕೋಟಿ ಬಿಡುಗಡೆ ಆಗಿದೆ. ಅದರಲ್ಲಿ ‌2000 ಕೋಟಿ ಈಗಾಗಲೇ ರೈತರ ಅಕೌಂಟ್ ಗೆ ಹೋಗಿದೆ. ವಾಣಿಜ್ಯ ಬ್ಯಾಂಕುಗಳ 2800 ಕೋಟಿ ರೈತರ ಅಕೌಂಟ್ ಗೆ ಹೋಗಿದೆ. ಇದೆಲ್ಲಾ ಏನು ಸುಮ್ಮನೇನಾ..? ಎಂದು ಮರು ಪ್ರಶ್ನೆ ಮಾಡಿದ್ರು.

ರೈತರ ಬಗ್ಗೆ ಯಾರು ಹಗುರವಾಗಿ ಮಾತನಾಡಬಾರದು. ಸರಿಯಾದ ಅಂಕಿ ಅಂಶಗಳನ್ನು ಇಟ್ಟುಕೊಂಡು ಮಾತನಾಡಬೇಕು ಎಂದು ಸುಮಲತಾಗೆ ಪರೋಕ್ಷ ಎಚ್ಚರಿಕೆ ನೀಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments