Webdunia - Bharat's app for daily news and videos

Install App

ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆಗೆ ತಾಂತ್ರಿಕ ಸಮಸ್ಯೆ: ಸಚಿವ ನಾರಾಯಣ ಗೌಡ

Webdunia
ಗುರುವಾರ, 2 ಜೂನ್ 2022 (16:30 IST)
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಈಗ ಬಿಜೆಪಿ ಬರಲು ಸಿದ್ಧರಿದ್ದಾರೆ. ಅವರು ಬಂದರೆ ಸ್ವಾಗತ ಮಾಡುತ್ತೇನೆ. ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆ ಇದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಪಕ್ಷಕ್ಕೆ ಬರುವುದಾಗಿ ತಿಳಿಸಿದ್ದಾರೆ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದಾಗಿ ಈಗ ಬರುವುದಕ್ಕೆ ಆಗುತ್ತಿಲ್ಲ ಅಂತ ಹೇಳಿದ್ದಾರೆ. ನೋಡೋಣ ಮುಂದೆ ಏನು ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಅಭ್ಯರ್ಥಿ ಹಾಕಿದೆ. ಅವರು ಗೆಲ್ಲುವುದಿಲ್ಲ. ನಮಲ್ಲಿ ಎರಡನೇ ಪ್ರಾಶಸ್ತ್ಯದ ಮತಗಳು ಇವೆ. ಎರಡನೇ ಪ್ರಾಶಸ್ತ್ಯದ ಮತದಲ್ಲಿ ನಾವು ಗೆಲ್ಲುತ್ತೇವೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.
ನಾವು 17 ಜನ ಈಗ ಬಂದಿದ್ದೇವೆ. ಅದು ಮುಂದೆ ಪ್ಲಸ್ ಪ್ಲಸ್ ಆಗುತ್ತದೆ. ಯಾರು, ಯಾರು ಬರುತ್ತಾರೆ ಅಂತ ಈಗ ಹೇಳುವುದಿಲ್ಲ. ಈಗ ಹೇಳಿದರೆ ಅವರನ್ನು ಕೂಡಿ ಹಾಕುತ್ತಾರೆ. ಈಗಾಗಲೇ 4-5 ಜನರ ಹೆಸರು ನೀವೇ ಹಾಕಿದ್ದೀರಾ. ಇನ್ನು ಯಾರೆಲ್ಲಾ ಬರ್ತಾರೆ ಅಂತ ಮುಂದೆ ಗೊತ್ತಾಗುತ್ತದೆ ಅಂದರು.
ನಮ್ಮ ಜಿಲ್ಲೆಯಲ್ಲಿ ಅನೇಕರು ಬಿಜೆಪಿ ಸೇರ್ಪಡೆಗೆ ಆಸಕ್ತಿ ತೋರಿಸಿದ್ದಾರೆ. ಆದರೆ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನ ಮಾಡಿ ಸೇರಿಸಿಕೊಳ್ಳುತ್ತೇವೆ. ಸದ್ಯ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಸಮಾವೇಶ ಈಗ ಮಾಡುವುದಿಲ್ಲ ಅಂತ ತಿಳಿಸಿದರು. ಇನ್ನು ಮಂಡ್ಯದಲ್ಲಿ ಈ ಬಾರಿ ನಾವು 4 ಸ್ಥಾನ ಗೆಲ್ಲುತ್ತೇವೆ. ಹೇಗೆ ಗೆಲ್ಲುತ್ತೇವೆ ಅಂತ ನಾನು ಹೇಳುವುದಿಲ್ಲ. ಆದರೆ 4 ಸ್ಥಾನ ಬಿಜೆಪಿ ಗೆಲ್ಲುತ್ತದೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments