Webdunia - Bharat's app for daily news and videos

Install App

ಲೋಕಸಭೆಗೆ ಸ್ಪರ್ಧೆ ಮಾಡಲ್ಲ, ಮಂಡ್ಯ ಬಿಟ್ಟು ಹೋಗಲ್ಲ: ಸುಮಲತಾ ನಿರ್ಧಾರ ಪ್ರಕಟ

Krishnaveni K
ಬುಧವಾರ, 3 ಏಪ್ರಿಲ್ 2024 (13:15 IST)
Photo Courtesy: Twitter
ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರದಿಂದ ಸುಮಲತಾ ಹಿಂದೆ ಸರಿದಿದ್ದಾರೆ. ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಅಷ್ಟೇ ಅಲ್ಲದೆ, ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗುವುದಾಗಿ ಸುಮಲತಾ ಘೋಷಿಸಿದ್ದಾರೆ. ಇಂದು ಮಂಡ್ಯದಲ್ಲಿ ಬೆಂಬಲಿಗರ  ಜೊತೆ ಸಭೆ ನಡೆಸಿದ ಸುಮಲತಾ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಈ ವೇಳೆ ಸುದೀರ್ಘವಾಗಿ ಮಾತನಾಡಿದ ಅವರು ಮಂಡ್ಯದಲ್ಲಿ ತಮ್ಮ ಕಾರ್ಯಸಾಧನೆ ಬಗ್ಗೆ ಭಾವುಕರಾಗಿ ಮಾತನಾಡಿದರು.

ಓರ್ವ ಒಬ್ಬಂಟಿ ಮಹಿಳೆಯಾಗಿ, ಪಕ್ಷೇತರ ಸಂಸದೆಯಾಗಿ ಮಂಡ್ಯಕ್ಕೆ ತಾನು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸುಮಲತಾ ವಿವರಣೆ ನೀಡಿದರು. ಮಂಡ್ಯಕ್ಕೆ ಇಷ್ಟೊಂದು  ಕೊಡುಗೆ ನೀಡಿದ ಪ್ರಧಾನಿ ಮೋದಿ ಸರ್ಕಾರವನ್ನು ಬೆಂಬಲಿಸದೇ ಇರಲು ಹೇಗೆ ಸಾಧ್ಯ? ಇಡೀ ಭಾರತವೇ ನಮ್ಮತ್ತ ತಿರುಗುವಂತೆ ಮಾಡಿದ ಮೋದಿಯವರನ್ನು ನಾವು ಬೆಂಬಲಿಸಬೇಕು. ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದರು.

ಇನ್ನು, ಮಂಡ್ಯದ ಹೊರತಾಗಿ ನನಗೆ ಬೇರೆ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೀರಾ ಕೇಳಿದರು. ಆದರೆ ಮಂಡ್ಯ ಬಿಟ್ಟು ಬೇರೆ ಎಲ್ಲೂ ಹೋಗಲ್ಲ. ನಾನು ಸೋತರೂ, ಗೆದ್ದರೂ ಮಂಡ್ಯದಲ್ಲಿಯೇ ಇರುತ್ತೇನೆ. ಮುಂದೆಯೂ ಮಂಡ್ಯ ಜನರೊಂದಿಗೇ ಇರುತ್ತೇನೆ ಎಂದಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments