Webdunia - Bharat's app for daily news and videos

Install App

ರಾಜ್ಯದಲ್ಲಿ ಬೇಸಿಗೆ ಇಫೆಕ್ಟ್: ಕೂಲರ್ ಗಳಿಗೆ ಹೆಚ್ಚಿದ ಬೇಡಿಕೆ

Krishnaveni K
ಬುಧವಾರ, 19 ಫೆಬ್ರವರಿ 2025 (08:45 IST)
Photo Credit: X
ಬೆಂಗಳೂರು: ರಾಜ್ಯಾದ್ಯಂತ ಈಗ ಭಾರೀ ಬಿಸಿಲು, ಸೆಖೆ ಶುರುವಾಗಿದ್ದು, ಅಂಗಡಿಗಳಲ್ಲಿ ಕೂಲರ್ ಗಳ ಖರೀದಿಗೆ ಈಗಾಗಲೇ ಜನ ಮುಗಿಬಿದ್ದಿದ್ದಾರೆ.

ಕಳೆದ ವರ್ಷವೂ ವಿಪರೀತ ಸೆಖೆಯಿಂದಾಗಿ ಜನ ತತ್ತರಿಸಿ ಹೋಗಿದ್ದರು. ಆದರೆ ಸದ್ಯದ ಹವಾಮಾನ ವರದಿಗಳ ಪ್ರಕಾರ ತಾಪಮಾನ ಕಳೆದ ವರ್ಷಕ್ಕಿಂತಲೂ  ಈ ವರ್ಷ ಹೆಚ್ಚಾಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಬೆಂಗಳೂರಿನಲ್ಲೇ 40 ಡಿಗ್ರಿ ತಲುಪಲಿದೆ ಎನ್ನಲಾಗಿದೆ.

ಹೀಗಾಗಿ ಬೇಸಿಗೆ ಎದುರಿಸಲು ಜನ ಈಗಿನಿಂದಲೇ ಸಜ್ಜಾಗಿದ್ದಾರೆ. ಕಳೆದ ವರ್ಷ ಬೆಂಗಳೂರಿನಲ್ಲಿ ನೀರಿನ ಕೊರತೆಯೂ ಆಗಿದ್ದರಿಂದ ಚಿಕ್ಕ ಗಾತ್ರದ ನೀರಿನ ಡ್ರಮ್ ಗಳಿಗೂ ಬೇಡಿಕೆ ಹೆಚ್ಚಾಗಿತ್ತು. ಈ ವರ್ಷವೂ ನೀರಿನ ಸಮಸ್ಯೆ ತಪ್ಪಿದ್ದಲ್ಲ.

ಜೊತೆಗೆ ಸೆಖೆಗಾಲವನ್ನು ಎದುರಿಸಲು ಕೂಲರ್ ಗಳೂ ಬೇಡಿಕೆ ಹೆಚ್ಚಾಗಿದೆ. ಮನೆ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಈಗಾಗಲೇ ಕೂಲರ್ ಗಳ ಸ್ಟಾಕ್ ತರಿಸಲು ತಯಾರಿ ನಡೆದಿದೆ. ಬಹುತೇಕ ದೊಡ್ಡ ಗಾತ್ರದಿಂದ ಹಿಡಿದು ಚಿಕ್ಕ ಗಾತ್ರದ ಕೂಲರ್ ಗಳವರೆಗೆ ಜನ ಕೊಂಡುಕೊಳ್ಳಲು ಮುಂದೆ ಬರುತ್ತಿದ್ದಾರೆ. ವಿಶೇಷವಾಗಿ ಒಂದು ಕುಟುಂಬದ ಅವಶ್ಯಕತೆ ನೀಗಿಸಬಲ್ಲ. ಮಧ್ಯಮ ಗಾತ್ರದ ಕೂಲರ್ ಗಳಿಗೆ ಹೆಚ್ಚು ಬೇಡಿಕೆಯಿದೆ ಎಂದು ಮಾರಾಟಗಾರರೊಬ್ಬರು ಹೇಳುತ್ತಾರೆ. ಇತ್ತೀಚೆಗಿನ ಸೆಖೆಗಾಲದಲ್ಲಿ ಫ್ಯಾನ್ ಕೂಡಾ ಸಾಕಾಗುತ್ತಿಲ್ಲ. ಹೀಗಾಗಿ ಜನ ಎಸಿ, ಕೂಲರ್ ಗಳಿಗೇ ಮೊರೆ ಹೋಗುತ್ತಿದ್ದಾರೆ. ಜನರ ಅಗತ್ಯಕ್ಕೆ ತಕ್ಕಂತೆ ಬಜೆಟ್ ಗೆ ಹೊಂದುವ ವಿವಿಧ ಕೂಲರ್ ಗಳನ್ನು ತರಿಸಿಟ್ಟುಕೊಳ್ಳುತ್ತಿದ್ದೇವೆ ಎಂದು ಮಾರಾಟಗಾರರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments