Webdunia - Bharat's app for daily news and videos

Install App

ಆರ್ಕಿಡ್ಸ್ ಶಾಲೆಯ ಮುಖ್ಯಸ್ಥರಿಗೆ ಸಮನ್ಸ್ ಜಾರಿ

Webdunia
ಬುಧವಾರ, 22 ಅಕ್ಟೋಬರ್ 2014 (15:20 IST)
ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಕಿಡ್ಸ್ ಶಾಲೆಯ ಪೋಷಕರು ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಶನಿವಾರದೊಳಗೆ ತನಿಖೆ ಪೂರ್ಣಗೊಳಿಸುವ ಭರವಸೆಯನ್ನು ಪೋಷಕರಿಗೆ ನೀಡಿದರು.

ಈ ನಡುವೆ ಶಾಲಾ ಆಡಳಿತ ಮಂಡಳಿಯ ಕೆಲವು ಕ್ರಮಗಳ ಬಗ್ಗೆ ಆಯುಕ್ತರಿಗೆ ಪೋಷಕರು ದೂರು ನೀಡಿದರು. ಈ ನಡುವೆ ಆರ್ಕಿಡ್ಸ್ ಶಾಲೆ ಮುಖ್ಯಸ್ಥರಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಶಾಲೆಯ ಮುಖ್ಯಸ್ಥ ಹೈದರಾಬಾದಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.  
 
ಏತನ್ಮಧ್ಯೆ,  ಶಾಲಾ ಆಡಳಿತ ಮಂಡಳಿ ಲಿಖಿತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಶಾಲೆಗೆ ಬೆಳಿಗ್ಗೆ 8.30ಕ್ಕೆ ಮಗು ಆಗಮಿಸಿದೆ. 12.30ಕ್ಕೆ ಶಾಲೆಯಿಂದ ಮಗು ವಾಪಸ್ ತೆರಳಿದೆ. ಪ್ರತಿ ಕ್ಷಣವೂ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಶಾಲೆಯ ಆವರಣಕ್ಕೆ ಯಾವುದೇ ಹೊರಗಿನ ವ್ಯಕ್ತಿ ಪ್ರವೇಶಿಸಿಲ್ಲ. ಮಗು ಮೂರು ಬಾರಿ ತರಗತಿಯಿಂದ ಹೊರಗೆ ಬಂದಿದೆ. ಪ್ರತಿ ನರ್ಸರಿ ಕ್ಲಾಸ್‌ರೂಂಗೆ ಒಬ್ಬ ಶಿಕ್ಷಕ, ಒಬ್ಬ ಸಹ ಶಿಕ್ಷಕ ಮತ್ತು ಆಯಾರನ್ನು ನೇಮಿಸಲಾಗಿದೆ ಎಂದು ತಿಳಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ