Publish Date: Tue, 11 Sep 2018 (20:53 IST)
Updated Date: Tue, 11 Sep 2018 (20:55 IST)
ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಸುನೀಲಗೌಡ ಪಾಟೀಲ್ ಗೆದ್ದಿರುವುದಕ್ಕೆ ಹಾಲಿ ವಿಧಾನ ಪರಿಷತ್ ಸದಸ್ಯ ಸಂತೋಷ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಎಂ.ಬಿ.ಪಾಟೀಲ ಸಹೋದರ ಸುನೀಲಗೌಡ ಪಾಟೀಲ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇದಕ್ಕಾಗಿ ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ ಸಂತಸ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿರುವ ಎಸ್.ಆರ್.ಪಾಟೀಲ್, ಜಾರಕಿಹೊಳಿ ಅವರ ಬಗ್ಗೆ ಯಾವುದೇ ಗೊಂದಲ ಇಲ್ಲ. ಅವರು ಕಾಂಗ್ರೆಸನಲ್ಲಿಯೇ ಇರಲಿದ್ದಾರೆ ಎಂದರು.
ಕಾಂಗ್ರೆಸ್ ಆರು ದಶಕಗಳ ಕಾಲ ಆಡಳಿತ ನಡೆಸಿದರೂ ಸಿಬಿಐ, ಐಟಿ, ಇಡಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಂಡಿಲ್ಲ. ಪ್ರಧಾನಿ ಮೋದಿ ಅವರ ಇ.ಡಿ ಹಾಗೂ ಐಟಿಗೆ ಕಾಂಗ್ರೆಸ್ ನವರು ಹೆದರಲ್ಲ ಎಂದರು.