Webdunia - Bharat's app for daily news and videos

Install App

‘ರವಿ ಬೆಳಗೆರೆ ಜಾಮೀನು ಕೊಡಬೇಡಿ, ಕೊಟ್ರೆ ನನ್ನ ಫಿನಿಶ್ ಮಾಡ್ತಾರೆ’

Webdunia
ಸೋಮವಾರ, 11 ಡಿಸೆಂಬರ್ 2017 (09:16 IST)
ಬೆಂಗಳೂರು: ಕೊಲೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಶದಲ್ಲಿರುವ ರವಿ ಬೆಳಗೆರೆ ಕೆಲವೇ ಕ್ಷಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಈ ನಡುವೆ ಅವರಿಗೆ ಜಾಮೀನು ಕೊಡಬೇಡಿ ಎಂದು ಸುನಿಲ್ ಹೆಗ್ಗರವಳ್ಳಿ ಮನವಿ ಮಾಡಿದ್ದಾರೆ.
 

ರವಿ ಬೆಳಗೆರೆ ಸಿಸಿಬಿ ಪೊಲೀಸರ ವಶದಲ್ಲಿರುವಾಗಲೇ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಹಾಗಿರುವಾಗ ಇಂತಹ ವ್ಯಕ್ತಿಗೆ ಜಾಮೀನು ಕೊಟ್ಟು ಹೊರ ಬಂದರೆ ನನ್ನ ಕತೆ ಮುಗಿಸುತ್ತಾರೆ ಅಷ್ಟೇ. ನನ್ನ ಜೀವ ತೆಗೆಯಲು ಅವರು ಹಿಂದೆ ಮುಂದೆ ನೋಡುವುದಿಲ್ಲ ಎಂದು ಸುನಿಲ್ ಹೆಗ್ಗರವಳ್ಳಿ ಅಳಲು ತೋಡಿಕೊಂಡಿದ್ದಾರೆ.

ಸಿಸಿಬಿ ಪೊಲೀಸರ ವಶದಲ್ಲಿದ್ದಾಗಲೇ ರವಿ ಬೆಳಗೆರೆ ತಮ್ಮ ಪರಿಚಿತರ ಮೊಬೈಲ್ ನಿಂದ ಸುನಿಲ್ ಹೆಗ್ಗರವಳ್ಳಿಗೆ ಕರೆ ಮಾಡಿ ತನ್ನ ಎರಡನೇ ಪತ್ನಿ ಯಶೋಮತಿ ಜತೆ ಸಂಬಂಧವಿದೆಯೆಂದು ಮಾಧ್ಯಮಗಳಿಗೆ ಹೇಳಿದ್ದೀಯಾ ಎಂದು ಪ್ರಶ್ನಿಸಿದ್ದರು ಎನ್ನಲಾಗಿದೆ.

ಹೀಗಾಗಿ ನನಗೆ ಅವರಿಂದ ಜೀವ ಭಯವಿದೆ. ರಕ್ಷಣೆ ಕೊಡಿ ಎಂದು ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವರ ಸಲಹೆಗಾರ ಕೆಂಪಯ್ಯ ಅವರ ಬಳಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments