ಪಕ್ಕಾ ಪ್ಲಾನ್ ಪ್ರಕಾರ ನಡೆದಿದ್ದರೆ ಗೌರಿ ಲಂಕೇಶ್ ಗೂ ಮೊದಲೇ ಸುನಿಲ್ ಹತ್ಯೆಯಾಗಬೇಕಿತ್ತು!

Webdunia
ಶನಿವಾರ, 9 ಡಿಸೆಂಬರ್ 2017 (08:10 IST)
ಬೆಂಗಳೂರು: ಪಕ್ಕಾ ಯೋಜನೆ ಪ್ರಕಾರ ಎಲ್ಲವೂ ನಡೆದಿದ್ದರೆ ವಿಚಾರವಾದಿ, ಪತ್ರಕರ್ತೆ ಗೌರಿ
ಲಂಕೇಶ್ ರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಕ್ಕಿಂತ ಮೊದಲೇ ಸುನಿಲ್ ಹೆಗ್ಗರವಳ್ಳಿ ಹತ್ಯೆಯಾಗಬೇಕಿತ್ತು.
 

ಆದರೆ ಸುನಿಲ್ ಅದೃಷ್ಟವೋ ಏನೋ ಎಂಬಂತೆ ಎರಡು ಬಾರಿ ಯೋಜನೆ ತಲೆ ಕೆಳಗಾಗಿ ಸುನಿಲ್ ಬಚವಾಗಿದ್ದರು. ಸುಪಾರಿ ಪಡೆದಿದ್ದ ಶಶಿಧರ್ ಆಗಸ್ಟ್ ತಿಂಗಳಲ್ಲೇ ಸುನಿಲ್ ಮನೆ ಸುತ್ತ ಮುತ್ತ ಸುಳಿದಾಡಿ ಹತ್ಯೆ ಸಂಚು ರೂಪಿಸಿದ್ದನಂತೆ.

ಆದರೆ ಮನೆಯ ಮುಂದೆ ಸಿಸಿಟಿವಿ ಕ್ಯಾಮರಾಗಳನ್ನು ನೋಡಿ ಸಿಕ್ಕಿ ಬೀಳಬಹುದೆಂಬ ಭಯದಿಂದ ಕೊಲ್ಲಲೆಂದು ಬಂದವನು ಬರಿಗೈಯಲ್ಲಿ ವಾಪಸಾಗಿದ್ದ ಎಂದು ಸುನಿಲ್ ಹೆಗ್ಗರವಳ್ಳಿ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಗೌರಿ ಹತ್ಯೆಯಾಗಿದ್ದು ಸೆಪ್ಟೆಂಬರ್ 5 ರಂದು. ಒಂದು ವೇಳೆ ಸುಪಾರಿ ಕಿಲ್ಲರ್ ಶಶಿಧರ್ ಯೋಜನೆ ಪಕ್ಕಾ ಆಗಿ ಕೆಲಸ ಮಾಡಿದ್ದರೆ ಆಗಸ್ಟ್ 28 ರಂದೇ ಸುನಿಲ್ ಹತ್ಯೆಯಾಗಿರುತ್ತಿತ್ತು. ನನ್ನ ಪುಣ್ಯವೋ, ತಂದೆ ತಾಯಿಯ ಆಶೀರ್ವಾದವೋ ಬದುಕುಳಿದಿದ್ದೆ ಎಂದು ಸುನಿಲ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments