Publish Date: Thu, 23 Sep 2021 (20:32 IST)
Updated Date: Thu, 23 Sep 2021 (20:38 IST)
ಬೆಂಗಳೂರು: ನಗರದ ಕುಮಾರ ಕೃಪಾ ರಸ್ತೆಯ ಚಿತ್ರಕಲಾ ಪರಿಷತ್ತಿನಲ್ಲಿ ನಡೆಯುತ್ತಿರುವ ನಡೆಯುತ್ತಿರುವ "ಅನಿಶ್ಚಿತತೆ" ಕಲಾಪ್ರದರ್ಶನವನ್ನು ಪ್ರದರ್ಶಿಸಿ ಕಲಾವಿದರ ಕಲಾಕೃತಿಗಳನ್ನು ನೋಡಿ ಕೆಲಸಮಯವಾಗಿರುವ ಲೋಕದಲ್ಲಿ ಸಂಚರಿಸಿದ ಅನುಭವವನ್ನು ನೀಡಿ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ.
ಕೊರೋನಾ ಸಂದರ್ಭದಲ್ಲಿ ಸಮಾಜದ ಪ್ರತಿಯೊಬ್ಬರಲ್ಲೂ ಉಂಟಾದ ಅನಿಶ್ಚಿತತೆ ಭಾವವನ್ನು, ಗ್ರಾಫಿಕ್ ಮುದ್ರಣ ಕಲೆಯ ಮೂಲಕ ಕರ್ನಾಟಕದ ವಿವಿಧ ಭಾಗಗಳ 75 ಕಲಾವಿದರು ಅತಿ ಸುಂದರ ಹಾಗೂ ಮನಸ್ಸಿನ ಆಳದಲ್ಲಿ ನಮ್ಮನ್ನು ಚಿಂತನೆಗೆ ಒಳಪಡಿಸುವಂತಹ ಕಲಾಕೃತಿಗಳನ್ನು ರಚಿಸಿದ್ದಾರೆ ಎಂದು ಶ್ಲಾಘಿಸಿದರು.
ದೇಶದಲ್ಲೇ ದೊಡ್ಡಮಟ್ಟದ ಗ್ರಾಫಿಕ್ ಮುದ್ರಣ ಕಲಾ ಪ್ರದರ್ಶನ ನಮ್ಮ ಕರ್ನಾಟಕದ ಕಲಾವಿದರಿಂದ ನಡೆಯುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ನಮ್ಮ ನಾಡು, ನುಡಿ, ಸಂಸ್ಕೃತಿಯ ಉಳಿವು ಹಾಗೂ ಅಭಿವೃದ್ಧಿಗಾಗಿ ಕಲಾವಿದರು ಮಾಡುವ ಕೆಲಸಕ್ಕೆ ಕನ್ನಡ ಸಂಸ್ಕೃತಿ ಇಲಾಖೆಯಿಂದ ಸಂಪೂರ್ಣ ಬೆಂಬಲವನ್ನು ನೀಡಲಾಗಿದೆ ಈ ಸಂದರ್ಭದಲ್ಲಿ ಕಲಾವಿದರಿಗೆ ಸುನಿಲ್ ಕುಮಾರ್ ಅವರು