Webdunia - Bharat's app for daily news and videos

Install App

ಭ್ರಷ್ಟಾಚಾರ ಬಗ್ಗೆ ಕಾಂಗ್ರೆಸ್ ಪಾಠ - ಸುನೀಲ್ ಕುಮಾರ್ ಲೇವಡಿ

Webdunia
ಮಂಗಳವಾರ, 6 ಸೆಪ್ಟಂಬರ್ 2022 (18:16 IST)
ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಹಾಸ್ಟೆಲ್‍ಗಳಲ್ಲಿ ದಿಂಬು, ಚಂಬು ಖರೀದಿಯಲ್ಲೂ ನಡೆದ ಭ್ರಷ್ಟಾಚಾರವನ್ನು ಸ್ವಲ್ಪ ನೆನಪಿಸಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಸುನೀಲ್‍ಕುಮಾರ್ ತಿರುಗೇಟು ನೀಡಿದ್ದಾರೆ.
ಇಲಾಖೆ ಯೋಜನೆಗಳ ಕುರಿತು ಸಿದ್ದರಾಮಯ್ಯ ಮಾಡಿದ್ದ ಟೀಕೆಗೆ ಪ್ರತಿಕ್ರಿಯಿಸಿರುವ ಅವರು, ಸಿದ್ದರಾಮಯ್ಯ ಅವರೇ, ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ನೀವು ಸಮಾಜವನ್ನು ಕೊಂಡೊಯ್ಯುವುದು ಯಾವಾಗ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ 75 ಯುನಿಟ್ ವಿದ್ಯುತ್ ನೀಡುವ ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದು ಸುಳ್ಳು ಪ್ರಚಾರ ಮಾಡಿ ನೀವು ಸಾಧಿಸುವ ಸಾಮಾಜಿಕ ನ್ಯಾಯವಾದರೂ ಏನು ಎಂದು ಪ್ರಶ್ನಿಸಿದ್ದಾರೆ.
 
ಹಿಂದಿನ ಆದೇಶ ವಾಪಸ್ ಪಡೆಯುವುದಕ್ಕೂ, ಘೋಷಿತ ಯೋಜನೆ ಸ್ಥಗಿತಗೊಳಿಸುವುದಕ್ಕೂ ಇರುವ ಆಡಳಿತಾತ್ಮಕ ವ್ಯತ್ಯಾಸವೂ ಗೊತ್ತಿಲ್ಲದಷ್ಟು ಅಜ್ಞಾನ ನಿಮ್ಮನ್ನು ಕಾಡುತ್ತಿದೆಯೇ, ನಿಮ್ಮ ಪಕ್ಷದ ಸಾಮಾಜಿಕ ಜಾಲತಾಣದ ಕೆಲ ಪೆದ್ದರು ಕೊಟ್ಟ ದಾಖಲೆಯನ್ನೇ ಆಧಾರವಾಗಿಟ್ಟುಕೊಂಡು ಜನರನ್ನು ಹಾದಿ ತಪ್ಪಿಸಲು ಹೊರಟಿದ್ದೀರಿ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments