Webdunia - Bharat's app for daily news and videos

Install App

ಬೇಸಿಗೆ ಕಾಲ ಶುರುವಾಯ್ತು - ಈ ವಸ್ತುಗಳು ತಪ್ಪದೇ ನಿಮ್ಮ ಮನೆಯಲ್ಲಿರಲಿ

Webdunia
ಮಂಗಳವಾರ, 3 ಮಾರ್ಚ್ 2020 (20:16 IST)
ಬೇಸಿಗೆಯಲ್ಲಿ ಈ ವಸ್ತುಗಳು ನಿಮ್ಮ ಮನೆಯಲ್ಲಿ ಇರಲೇಬೇಕು. 

ಸೂರ್ಯ ನಗರಿ ಖ್ಯಾತಿಯ ಕಲಬುರಗಿ ನಗರದಲ್ಲಿ ಬೇಸಿಗೆ ಆರಂಭಗೊಂಡಿದ್ದು, ಜೂನ್ ಅಂತ್ಯದವರೆಗೆ ಬಿಸಿಲಿನ ಪ್ರಮಾಣ ಇನ್ನೂ ಹೆಚ್ಚಲಿದೆ. ಬೇಸಿಗೆ ಕಾಲದಲ್ಲಿ ಸಾಮಾನ್ಯವಾಗಿ ಅತೀ ಹೆಚ್ಚು ಅಗ್ನಿ ಅವಘಡ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಆಸ್ತಿ ಪಾಸ್ತಿ ನಷ್ಟವಾಗದಂತೆ ಮುನ್ನಚ್ಚರಿಕೆ ಕ್ರಮವಾಗಿ ಜಿಲ್ಲೆಯ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸ್ಥಳಗಳಲ್ಲಿ ಅಗ್ನಿಶಾಮಕ ಉಪಕರಣ ಮತ್ತು ನೀರಿನ ಸಂಗ್ರಹಗಾರಗಳನ್ನು ಹೊಂದುವಂತೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಟಿ. ಪರಶುರಾಮ ಸಲಹೆ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯ ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಘಟಕಗಳು, ಟೈರ್ ಕಾರ್ಖಾನೆಗಳು, ಪೀಠೋಪಕರಣಗಳ ಮಳಿಗೆಗಳು, ಗೋದಾಮುಗಳು, ತೈಲ ಸಂಗ್ರಹಗಾರಗಳು, ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ಬಹುಮಹಡಿ ಕಟ್ಟಡಗಳು ಮತ್ತು ವಾಣಿಜ್ಯ ಮಳಿಗೆಗಳು ಇತ್ಯಾದಿಗಳಲ್ಲಿ ಅಗ್ನಿ ಅನಾಹುತಗಳನ್ನು ತಡೆಯಲು ಅಗ್ನಿಶಾಮಕ ಉಪಕರಣಗಳನ್ನು ಮತ್ತು ಸಾಕಷ್ಟು ನೀರಿನ ಸಂಗ್ರಹಗಾರ ಹೊಂದುವುದು ತುಂಬಾ ಅವಶ್ಯವಾಗಿದೆ.

ಅಗ್ನಿ ಅವಘಡ ಸಂದರ್ಭದಲ್ಲಿ ತೆಗೆದುಕೊಳ್ಳಬಹುದಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅಗ್ನಿಶಾಮಕ ಇಲಾಖೆಯಿಂದ ಉಚಿತವಾಗಿ ನಿರಂತರ ಉಪನ್ಯಾಸ ಮತ್ತು ಅಣುಕು ಪ್ರದರ್ಶನ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈ ಕುರಿತು ಹೆಚ್ಚಿನ ವಿವರಗಳಿಗೆ ಮತ್ತು ಉಪನ್ಯಾಸ ಮತ್ತು ಅಣಕು ಪ್ರದರ್ಶನಕ್ಕೆ ಅಗ್ನಿಶಾಮಕ ಠಾಣೆಯನ್ನು ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments