Webdunia - Bharat's app for daily news and videos

Install App

ತಂದೆ ಕೊಲೆಗೆ ಮಗನ ಸುಪಾರಿ ಆರೋಪ

Webdunia
ಗುರುವಾರ, 16 ಫೆಬ್ರವರಿ 2023 (13:41 IST)
ಆಸ್ತಿ ವಿಚಾರಕ್ಕೆ ಮಗನೇ ಸುಪಾರಿ ನೀಡಿ ತಂದೆಯನ್ನು ಕೊಲೆ ಮಾಡಿಸಿರುವ ಆರೋಪ ಕೇಳಿಬಂದಿದೆ. ನಾರಾಯಣಸ್ವಾಮಿ ಕೊಲೆಯಾದ ತಂದೆ. ಆರೋಪಿ ಮಣಿಕಂಠ ಸುಪಾರಿ ನೀಡಿರುವ ಪುತ್ರ. ಬೆಂಗಳೂರಿನ ಮಾರತ್ತಹಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಕಂಠ ಈ ಹಿಂದೆ ತನ್ನ ಮೊದಲ‌ ಪತ್ನಿಯನ್ನು ಕೊಲೆ ಮಾಡಿ ಜೈಲು ಸೇರಿದ್ದ. ಜೈಲಿನಿಂದ ಹೊರಬಂದು 2ನೇ ವಿವಾಹವಾಗಿದ್ದ, ಒಬ್ಬ ಹೆಣ್ಣು ಮಗಳಿದ್ದಳು. ಎರಡನೇ ಮದುವೆ ಬಳಿಕವೂ ಬೇರೊಬ್ಬ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ಗೊತ್ತಾಗಿ ಎರಡನೇ ಪತ್ನಿ ಪತಿಯಿಂದ ದೂರವಿದ್ದಳು. ವಿಚ್ಛೇದನ ವಿಚಾರವಾಗಿಯೂ ಮಾತುಕತೆ ನಡೆಯುತ್ತಿತ್ತು. ಆದರೆ ವಿಚ್ಛೇದನ ಕೊಡುವುದು ಬೇಡ ಎಂದು ಮಾವ ನಾರಾಯಣಸ್ವಾಮಿ ಕೇಳಿಕೊಂಡಿದ್ದ. ಆದರೆ ಇದಕ್ಕೆ ಸೊಸೆ ಒಪ್ಪಲಿಲ್ಲ. ಹೀಗಾಗಿ ವಿಚ್ಛೇದನ ಬಳಿಕ ಸೊಸೆ ಹಾಗೂ ಮೊಮ್ಮಗಳಿಗೆ ಕಷ್ಟವಾಗಬಹುದು, ಅವರ ಜೀವನ ನಿರ್ವಹಣೆ ಕಷ್ಟ ಆಗುತ್ತೆ ಎಂದು ಸೈಟ್​​ವೊಂದನ್ನ ಅವರ ಹೆಸರಿಗೆ ಮಾಡಲು ಮಾವ ನಾರಾಯಣಸ್ವಾಮಿ ‌ಮುಂದಾಗಿದ್ದ. ಆದರೆ ಇದು ಮಣಿಕಂಠನಿಗೆ ಇಷ್ಟವಿರಲಿಲ್ಲ. ಹೀಗಾಗಿ ತಂದೆ ಕೊಲೆಗೆ ಮಗ ಮಣಿಕಂಠ ಸುಪಾರಿ ನೀಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಸುಪಾರಿ ಪಡೆದವರು ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪಣತ್ತೂರಿನ ಕಾವೇರಪ್ಪ ಲೇಔಟ್​​ನಲ್ಲಿ ನಾರಾಯಣಸ್ವಾಮಿಯನ್ನು ಕೊಂದು‌ ಪರಾರಿಯಾಗಿದ್ದಾರೆ. ಸದ್ಯ ಮಾರತ್ತಹಳ್ಳಿ ಪೊಲೀಸರು ಮಣಿಕಂಠನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments