Webdunia - Bharat's app for daily news and videos

Install App

ಸ್ವಂತ ತಂದೆಯಿಂದಲೇ ಮಗನ ಕೊಲೆಗೆ ಸುಪಾರಿ : ಒಂದು ಸುಣ್ಣದ ಡಬ್ಬಿ ಹತ್ಯೆಯ ಕಥೆ ಹೇಳಿತು!

Webdunia
ಶನಿವಾರ, 26 ಆಗಸ್ಟ್ 2023 (13:31 IST)
ಬೆಳಗಾವಿ : ಹೆತ್ತಪ್ಪನೇ ಮಗನ ಕೊಲೆಗೆ ಮನೆ ಕೆಲಸದವನಿಗೆ ಸುಪಾರಿ ಕೊಟ್ಟು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿಸಿರುವ ಘಟನೆ ಬೈಲಹೊಂಗಲ ತಾಲೂಕಿನ ಕುಟರನಟ್ಟಿ ಗ್ರಾಮದಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಮುರಗೋಡ ಪೊಲೀಸರು ಬಂಧಿಸಿದ್ದಾರೆ.
 
ಬೈಲಹೊಂಗಲ ಪಟ್ಟಣದ ನಿವಾಸಿ ಸಂಗಮೇಶ ತಿಗಡಿ (38) ಕೊಲೆಯಾದ ವ್ಯಕ್ತಿ. ಮಾರುತೆಪ್ಪ ತಿಗಡಿ (72) ಮಗನ ಕೊಲೆಗೆ ಸುಪಾರಿ ಕೊಟ್ಟ ಅಪ್ಪ. ಆಗಸ್ಟ್ 20ರಂದು ರಾತ್ರಿ ಸಂಗಮೇಶಗೆ ಮದ್ಯ ಕುಡಿಸಿ ಕುಟರನಟ್ಟಿ ಗ್ರಾಮದ ಹೊರವಲಯದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. 

ಹತ್ಯೆಯಾದವನ ಕಿಸೆಯಲ್ಲಿದ್ದ ಸುಣ್ಣದ ಡಬ್ಬಿ ಆರೋಪಿಯನ್ನು ಪತ್ತೆಹಚ್ಚಲು ಸಹಾಯ ಮಾಡಿದೆ. ಮೃತನ ಜೇಬಲ್ಲಿದ್ದ ಸುಣ್ಣದ ಡಬ್ಬಿಯಲ್ಲಿ ಕೊಲೆ ಮಾಡಿದ ಹಂತಕನ ನಂಬರ್ ಇತ್ತು. ತನ್ನ ಬಳಿ ಮೊಬೈಲ್ ಇಲ್ಲದ್ದಕ್ಕೆ ಮನೆಗೆಲಸ ಮಾಡುತ್ತಿದ್ದಾತನ ನಂಬರ್ ಅನ್ನು ಚೀಟಿಯಲ್ಲಿ ಬರೆದು ಸುಣ್ಣದ ಡಬ್ಬಿಯಲ್ಲಿ ಸಂಗಮೇಶ ಇಟ್ಟುಕೊಂಡಿದ್ದ. 

ಪ್ರಕರಣದ ಹಿಂದೆ ಬಿದ್ದ ಪೊಲೀಸರು ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸಂಗಮೇಶ ಮನೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಕುಡಿದು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ: ಸಂಸತ್ತಿ‌ನಲ್ಲಿ ಗುಡುಗಿದ ಅಮಿತ್ ಶಾ

ಏನಿದು ಮಾಲೆಗಾಂವ್ ಸ್ಫೋಟ ಪ್ರಕರಣ: ಸಾದ್ವಿ ಪ್ರಜ್ಞಾ ಸಿಂಗ್ ಪಾತ್ರವೇನು

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಮುಂದಿನ ಸುದ್ದಿ
Show comments