Webdunia - Bharat's app for daily news and videos

Install App

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ತಮ್ಮನ ಹತ್ಯೆಗೆ ಸುಪಾರಿ ಕೊಟ್ರು!

Webdunia
ಸೋಮವಾರ, 8 ಆಗಸ್ಟ್ 2022 (13:38 IST)
ಕಲಬುರಗಿ : ರಕ್ಷಾ ಬಂಧನ ಇನ್ನೇನು ಹತ್ತಿರದಲ್ಲೇ ಇದೆ. ರಕ್ಷಾ ಬಂಧನ ಅಂದರೆ ಸಹೋದರ, ಸಹೋದರಿಯರ ಬಾಂಧವ್ಯವನ್ನು ಸಾರುವ ಹಬ್ಬ  ಇದು.
 
ಸಹೋದರಿ ತನ್ನ ಸಹೋದರನಿಗೆ ರಾಖಿ ಕಟ್ಟಿ, ಶುಭವಾಗಲಿ ಅಂತ ಹಾರೈಸುತ್ತಾಳೆ. ರಾಖಿ ಕಟ್ಟಿಸಿಕೊಂಡ ಸಹೋದರ ನಿನ್ನ ರಕ್ಷಣೆ ಮಾಡುತ್ತೇನೆ ಅಂತ ವಾಗ್ದಾನ ಮಾಡುತ್ತಾನೆ.

ಆದರೆ ಕಲಬುರಗಿಯಲ್ಲಿ ಇಂತಹ ಪವಿತ್ರವಾದ ಅಕ್ಕ, ತಮ್ಮನ ಸಂಬಂಧಕ್ಕೆ ಮಹಿಳೆಯರಿಬ್ಬರು ಮಸಿ ಎರಚಿದ್ದಾರೆ. ತನ್ನ ತಮ್ಮನನ್ನೇ ಸುಪಾರಿ  ಕೊಟ್ಟು ಕೊಲ್ಲಿಸಿದ್ದಾರೆ. ವಿಚಾರ ತಿಳಿದು ಇಡೀ ಕಲಬುರಗಿಗೆ ಕಲಬುರಗಿಯೇ ಬೆಚ್ಚಿ ಬಿದ್ದಿದೆ.

 

ಕಳೆದ ತಿಂಗಳು ಜುಲೈ 29ರಂದು ಕಲಬುರಗಿ ನಗರದ ಹೊರವಲಯದ ಅಳಂದ ರಸ್ತೆಯ ಕೆರೆಭೋಸ್ಗಾ ಕ್ರಾಸ್ ಬಳಿಯ ಜಮೀನೊಂದರ ಬಳಿ ಯುವಕನೋರ್ವ ಶವ ಬಿದ್ದಿತ್ತು. ಆತನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು,  ನಂತರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಆತನನ್ನು ಬರ್ಬರವಾಗಿ ಕೊಂದಿದ್ದ ಹಂತಕರು, ಆತ ಪ್ರಾಣ ಬಿಡುತ್ತಲೇ ಅಲ್ಲಿಂದ ಎಸ್ಕೇಪ್ ಆಗಿದ್ದರು.

ಈ ಬಗ್ಗೆ ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಅವಿನಾಶ್, ಆಸಿಫ್, ರೋಹಿತ್, ಮೋಸಿನ್ ಹಾಗೂ ಅನಿತಾ, ಮೀನಾಕ್ಷಿ ಎಂಬ ಇಬ್ಬರು ಮಹಿಳೆಯರು ಸೇರಿ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಅಷ್ಟಕ್ಕೂ ಕೊಲೆಯಾಗಿದ್ದ ವ್ಯಕ್ತಿಯನ್ನು ಗಾಜಿಪುರ ಬಡಾವಣೆಯ ನಿವಾಸಿ ನಾಗರಾಜ್ ಮಟಮಾರಿ ಅಂತ ಗುರುತಿಸಲಾಗಿದೆ. ಆತನನ್ನು ಹಂತಕರು ಕೆರೆಭೋಸ್ಗಾ ಕ್ರಾಸ್ ಬಳಿಯ ಜಮೀನೊಂದರ ಬಳಿ ಬರ್ಬರವಾಗಿ ಕೊಂದಿದ್ದರು.

ಹೌದು, ನಾಗರಾಜ್ ಮಟಮಾರಿ ಹತ್ಯೆಯ ಹಿಂದೆ ಆತನ ಅಕ್ಕಂದಿರಾದ ಅನಿತಾ ಹಾಗೂ ಮೀನಾಕ್ಷಿ ಎಂಬುವರ ಕೈವಾಡ ಇರುವುದಾಗಿ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಈ ಇಬ್ಬರು ಸಹೋದರಿಯರು ತಮ್ಮನ ಹತ್ಯೆಗೆ 50 ಸಾವಿರ ರೂಪಾಯಿ ಹಣ ಕೊಟ್ಟಿದ್ದರು ಎನ್ನಲಾಗಿದೆ. ಇವರಿಂದ ಹಣ ಪಡೆದ ಸುಪಾರಿ ಕಿಲ್ಲರ್ ಗಳಾದ ಅವಿನಾಶ್, ಆಸಿಫ್, ರೋಹಿತ್, ಮೋಸಿನ್ ಸೇರಿದಂತೆ  ನಾಗರಾಜ್ನನ್ನು ಹತ್ಯೆ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments