Select Your Language

Notifications

webdunia
webdunia
webdunia
webdunia

ಭಾಸ್ಕರರಾವ್ ಪದಚ್ಯುತಿಗೆ ಒತ್ತಾಯಿಸಿದ ಅರ್ಜಿ ಸುಪ್ರೀಂಕೋರ್ಟ್ ವಜಾ

ಭಾಸ್ಕರರಾವ್  ಪದಚ್ಯುತಿಗೆ  ಒತ್ತಾಯಿಸಿದ ಅರ್ಜಿ ಸುಪ್ರೀಂಕೋರ್ಟ್   ವಜಾ
ನವದೆಹಲಿ , ಶುಕ್ರವಾರ, 27 ನವೆಂಬರ್ 2015 (16:21 IST)
ಲೋಕಾಯುಕ್ತ ನ್ಯಾ. ಭಾಸ್ಕರರಾವ್ ವಜಾಕ್ಕೆ ಒತ್ತಾಯಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಚ್.ಎಲ್. ದತ್ತು ಪೀಠ ವಜಾ ಮಾಡಿದೆ. ಖಾಸಗಿ ವ್ಯಕ್ತಿಯೊಬ್ಬರು ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.  ಲೋಕಾಯುಕ್ತರ ವಜಾಕ್ಕೆ ವಿಧಾನಸಭೆಯಲ್ಲಿ ಪ್ರಕ್ರಿಯೆ ಆರಂಭವಾಗಿರುವುದರಿಂದ ಸುಪ್ರೀಂಕೋರ್ಟ್‌ನಲ್ಲಿ ಈ ವಿಚಾರದ ಬಗ್ಗೆ ವಿಚಾರಣೆ ಇಲ್ಲ ಎಂದು ದತ್ತು ಸ್ಪಷ್ಟಪಡಿಸಿದರು.

 ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿಗೆ ಕೋರಿ ಅವರ ವಕೀಲರು ಸುಪ್ರೀಂಕೋರ್ಟ್‌ಗೆ  ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಕುಟುಂಬ ವಾಸದ ಹಿನ್ನೆಲೆಯಲ್ಲಿ ರೆಡ್ಡಿ ಬಳ್ಳಾರಿ ಭೇಟಿಗೆ ಕೋರಿಕೆ ಸಲ್ಲಿಸಿದ್ದರು.

ಏಪ್ರಿಲ್‌ನಲ್ಲಿ ಅರ್ಜಿ ಸಲ್ಲಿಸಲು ನ್ಯಾ. ದತ್ತು ನೇತೃತ್ವದ  ಸುಪ್ರೀಂಕೋರ್ಟ್ ಪೀಠ ಸಲಹೆ ಮಾಡಿ ಅರ್ಜಿ ಸ್ವೀಕರಿಸಲು ಈಗ ಸಕಾಲವಲ್ಲ ಎಂದು ನುಡಿದಿದೆ. ಸುಪ್ರೀಂಕೋರ್ಟ್ ಸಲಹೆ ಹಿನ್ನೆಲೆಯಲ್ಲಿ ಅರ್ಜಿಯನ್ನು ವಾಪಸ್ ಪಡೆಯಲಾಗಿದೆ. 

Share this Story:

Follow Webdunia kannada