Select Your Language

Notifications

webdunia
webdunia
webdunia
webdunia

ಸುಪ್ರೀಂ ತೀರ್ಪಿಗೆ ಆಕ್ರೋಶ: ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭುಗಿಲೆದ್ದ ಪ್ರತಿಭಟನೆ

ಸುಪ್ರೀಂಕೋರ್ಟ್
ಮಂಡ್ಯ , ಮಂಗಳವಾರ, 20 ಸೆಪ್ಟಂಬರ್ 2016 (17:02 IST)
ಕಾವೇರಿ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ಇಂದು ನೀಡಿದ ತೀರ್ಪು ಕರ್ನಾಟಕ ಸರಕಾರಕ್ಕೆ ಮಾರಕವಾಗಿದೆ ಎಂದು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ಆಘಾತ ವ್ಯಕ್ತಪಡಿಸಿದ್ದಾರೆ.
 
ಸುಪ್ರೀಂಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಕಾವೇರಿ ಹಿತರಕ್ಷಣಾ ಸಮಿತಿ ಸೇರಿದಂತೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯ ದಾರಿ ತುಳಿದಿವೆ. ಯಾವುದೇ ಕಾರಣಕ್ಕೂ ನೀರು ಬಿಡಬೇಡಿ ಎಂದು ಸರಕಾರವನ್ನು ಒತ್ತಾಯಿಸಿವೆ.
 
ಬೆಂಗಳೂರು, ಮಂಡ್ಯ ,ಮೈಸೂರು ಮತ್ತು ಚಾಮರಾಜಪೇಟೆ ಜಿಲ್ಲೆಗಳಲ್ಲಿ ರೈತ ಸಂಘಟನೆಗಳ ಪ್ರತಿಭಟನೆ ತಾರಕಕ್ಕೇರಿದೆ.
 
ಸುಪ್ರೀಂಕೋರ್ಟ್ ತೀರ್ಪಿನಿಂದ ಕಾವೇರಿ ಕಣಿವೆಯ ರೈತರಿಗೆ ತುಂಬಾ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗಿ ಬಾಯಿ ಬಾಯಿ ಬಡಿದುಕೊಂಡ ರೈತರು, ಸರಕಾರಕ್ಕೆ ಮತ್ತು ಸುಪ್ರೀಂಕೋರ್ಟ್‌ಗೆ ಹಿಡಿಶಾಪ ಹಾಕಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕರುನಾಡಿಗೆ ಮತ್ತೆ ಆಘಾತ: ಪ್ರತಿದಿನ 6 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ