Select Your Language

Notifications

webdunia
webdunia
webdunia
webdunia

ಕರುನಾಡಿಗೆ ಮತ್ತೆ ಆಘಾತ: ಪ್ರತಿದಿನ 6 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ

ಸುಪ್ರೀಂಕೋರ್ಟ್
ನವದೆಹಲಿ , ಮಂಗಳವಾರ, 20 ಸೆಪ್ಟಂಬರ್ 2016 (16:51 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ಸೆಪ್ಟೆಂಬರ್ 28ರವರೆಗೂ ಪ್ರತಿ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ. 
4 ವಾರಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಗಡುವು ನೀಡಿದ್ದು, ಕಾವೇರಿ ವಿವಾದದ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಲಾಗಿದೆ. 
 
ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ಸೆಪ್ಟೆಂಬರ್ 28ರವರೆಗೂ ಪ್ರತಿ ದಿನ 6 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. 
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಪರವಾಗಿ ವಾದ ಮಂಡಿಸುವ ಹಿರಿಯ ವಕೀಲ ನಾರಿಮನ್ ಅವರು ವಾದ ಮಂಡನೆಯಲ್ಲಿ ಮತ್ತೊಮ್ಮೆ ವಿಫಲರಾಗಿದ್ದಾರೆ.
 
ಕಾವೇರಿಯ ನ್ಯಾಯಮಂಡಳಿಯಲ್ಲಿ ತಿಂಗಳು ಆಧಾರದ ಮೇಲೆ ನೀರು ಹಂಚಿಕೆಗೆ ಯಾವುದೇ ಸೂತ್ರವಿಲ್ಲ. ತಮಿಳುನಾಡಿಗೆ ಅಗತ್ಯವಾದ ನೀರನ್ನು ಬಿಡಲಾಗಿದೆ ಎಂದು ನಾರಿಮನ್ ವಾದಿಸಿದ್ದರು. 

ಈಗಾಗಲೇ ತಮಿಳುನಾಡಿಗೆ 1.60 ಲಕ್ಷ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲಾಗಿದೆ. ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲು ಸಾಧ್ಯವಿಲ್ಲ. ತಮಿಳುನಾಡಿಗೆ ನೀರು ಹರಿಸಿದರೇ ಕರ್ನಾಟಕದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತದೆ ಎಂದು ವಾದಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

'ಪ್ರಬಲ ಪ್ರಧಾನಿ' ಎಂದು ಸಾಬೀತು ಪಡಿಸಿ