Select Your Language

Notifications

webdunia
webdunia
webdunia
webdunia

ಕ್ರಿಮಿನಲ್ ಮೊಕದ್ದಮೆ ಎದುರಿಸಲು ಸುಪ್ರೀಂಕೋರ್ಟ್ ಆದೇಶ: ಕುಮಾರಸ್ವಾಮಿ ದಂಪತಿಗೆ ಸಂಕಷ್ಟ

ಕ್ರಿಮಿನಲ್ ಮೊಕದ್ದಮೆ
ಬೆಂಮಗಳೂರು , ಮಂಗಳವಾರ, 27 ಸೆಪ್ಟಂಬರ್ 2016 (13:06 IST)
ವಿಶ್ವ ಭಾರತಿ ಹೌಸಿಂಗ್ ಸೊಸೈಟಿಗೆ ಭೂಮಿ ನೀಡಿರುವ ಪ್ರಕರಣ ಹಾಗೂ ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುವಂತೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
 
ಕಳೆದ 2011ರಲ್ಲಿ ಈ ಎರಡು ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿತ್ತು. ಆದರೆ, ಹೈಕೋರ್ಟ್ ನೀಡಿದ ವಜಾ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್, ಈ ಪ್ರಕರಣಗಳನ್ನು ಮರು ವಿಚಾರಣೆ ನಡೆಸಿ ಕ್ರಿಮಿನಲ್ ಮೊಕದ್ದಮೆ ಎದುರಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 
 
ಸುಮಾರು ಐದು ವರ್ಷಗಳ ನಂತರ ಸುಪ್ರೀಂಕೋರ್ಟ್ ರಾಜ್ಯದ ಹೈಕೋರ್ಟ್ ನೀಡಿದ ಆದೇಶ ರದ್ದುಗೊಳಿಸಿದ್ದರಿಂದ ಪ್ರಕರಣದಲ್ಲಿ ಆರೋಪಿಗಳಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಂಪತಿಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬೆಣ್ಣೆಯಂತಿರುವ ಕೆಂಪು ಗಲ್ಲದ ಹುಡುಗಿ ನೀ ಕಾಶ್ಮೀರಿಯಾ? : ಮತ್ತೊಂದು ವಿವಾದದಲ್ಲಿ ಆಸಾರಾಂ ಬಾಪು