ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
ರೆಡ್ಡಿ ಜಾಮೀನು ಅರ್ಜಿಯನ್ನು ಪರಿಶೀಲಿಸಿದ ಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಸಿಬಿಐ ತನಿಖೆ ನಡೆಯುತ್ತಿರುವುದರಿಂದ ಜಾಮೀನು ನೀಡಲು ಬರುವುದಿಲ್ಲ ಎಂದು ಹೇಳಿದೆ. ಮೂರು ತಿಂಗಳ ತರುವಾಯ ಜಾಮೀನು ಅರ್ಜಿ ಸಲ್ಲಿಸುವಂತೆ ರೆಡ್ಡಿಯವರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಜಾಮೀನು ಸಿಗಬಹುದೆಂಬ ವಿಶ್ವಾಸದಲ್ಲಿದ್ದ ರೆಡ್ಡಿ ಇದರಿಂದ ತೀವೃ ನಿರಾಸೆಗೊಳಗಾಗಿದ್ದಾರೆ.