Webdunia - Bharat's app for daily news and videos

Install App

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಯಾರ ಷಡ್ಯಂತ್ರವಿದೆ ಎಂದು ಬಯಲು ಮಾಡ್ತೀನಿ: ಸೂರಜ್ ರೇವಣ್ಣ

Krishnaveni K
ಸೋಮವಾರ, 26 ಆಗಸ್ಟ್ 2024 (16:55 IST)
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಸಿಲುಕಿಸಿ ಹಾಸನದಿಂದ ಹೊರಹಾಕಲು ಷಡ್ಯಂತ್ರ ಮಾಡಲಾಗಿದೆ. ಇದರಲ್ಲಿ ಯಾರೆಲ್ಲಾ ಇದ್ದಾರೆ ಎಂದು ಶೀಘ್ರದಲ್ಲೇ ಬಯಲು ಮಾಡ್ತೀನಿ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ.

ಸೂರಜ್ ರೇವಣ್ಣ ವಿರುದ್ಧ ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣವಿದೆ. ಈ ಸಂಬಂಧ ಬಂಧನದಲ್ಲಿದ್ದ ಅವರು ಈಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ತಂದೆ ಎಚ್ ಡಿ ರೇವಣ್ಣ ಕೂಡಾ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆ ಪಡೆದಿದ್ದರು. ಆದರೆ ತಮ್ಮ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಆರೋಪ ಕುರಿತಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಈಗಲೂ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಇದೆಲ್ಲಾ ತಮ್ಮ ಕುಟುಂಬವನ್ನು ಹಾಸನದಿಂದ ಹೊರಹಾಕಲು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಷಡ್ಯಂತ್ರ ಎಂದು ಸೂರಜ್ ಆರೋಪಿಸಿದ್ದಾರೆ. ಪೆನ್ ಡ್ರೈವ್ ಬಿಡುಗಡೆ ಮಾಡಿದವರ ವಿರುದ್ಧ ಇದುವರೆಗೆ ಯಾಕೆ ಕ್ರಮ ಕೈಗೊಂಡಿಲ್ಲ, ಯಾರನ್ನೂ ಬಂಧಿಸಿಲ್ಲವೇಕೆ? ಇದೆಲ್ಲಾ ಷಡ್ಯಂತ್ರದ ಭಾಗ. ಸದ್ಯದಲ್ಲೇ ಎಲ್ಲವನ್ನೂ ಬಹಿರಂಗಪಡಿಸುತ್ತೆನೆ ಎಂದು ಸೂರಜ್ ಹೇಳಿದ್ದಾರೆ.

ನಮ್ಮ ಮೇಲೆ ಕುತಂತ್ರ, ಷಡ್ಯಂತ್ರ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಸರಿಯಾದ ಉತ್ತರ ಕೊಡ್ತೀನಿ. ರೇವಣ್ಣನವರಿಗೆ ಯಾವ ಪ್ರಕರಣದಲ್ಲೂ ಸಂಬಂಧವೇ ಇಲ್ಲ. ಆದರೂ ಜೈಲಿಗೆ ಹಾಕಿಸಿದರು. ಭವಾನಿ ರೇವಣ್ಣ ಟೆರರಿಸ್ಟಾ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

Rahul Gandhi: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಅನಾಹುತವಾಗುತ್ತದೆ: ಕರ್ನಾಟಕ ಬಿಜೆಪಿ ಆರೋಪ

Pahalgam Terror Attack: ಗಾಯಗೊಂಡವರನ್ನು ಭೇಟಿಯಾಗಿ, ಧೈರ್ಯ ತುಂಬಿದ ಅಮಿತ್ ಶಾ

ಮುಂದಿನ ಸುದ್ದಿ