Webdunia - Bharat's app for daily news and videos

Install App

ಚುನಾವಣೆಗೂ ಮುನ್ನವೇ ಮೋದಿಗೆ ಮೊದಲ ಜಯ ತಂದುಕೊಟ್ಟ ಸೂರತ್

Sampriya
ಸೋಮವಾರ, 22 ಏಪ್ರಿಲ್ 2024 (17:04 IST)
Photo Courtesy X
ಸೂರತ್:  ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತವಾಗಿ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ  ಬಿಜೆಪಿ ಪಕ್ಷಕ್ಕೆ ಮೊದಲ ಜಯ ಸಿಕ್ಕಿದೆ.

ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಕಾರಣ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.

ಎಕ್ಸ್‌ ಖಾತೆಯಲ್ಲಿ ಈ ವಿಷಯವನ್ನು ಬಿಜೆಪಿ ಪಕ್ಷದ ಗುಜರಾತ್ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲ ಕಮಲವನ್ನು ಉಡುಗೊರೆಯಾಗಿ ಸೂರತ್ ನೀಡಿದೆ. ಅವಿರೋಧವಾಗಿ ಆಯ್ಕೆಯಾದ ನಮ್ಮ ಪಕ್ಷದ ಅಭ್ಯರ್ಥಿ ಮುಕೇಶ್ ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿದರೆ, 8 ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರೆಲ್ಲರೂ ತಮ್ಮ ನಾಮಪತ್ರ ಹಿಂಪಡೆದ ಹಿನ್ನೆಲೆ ಇದೀಗ ಮುಖೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments