Webdunia - Bharat's app for daily news and videos

Install App

ಮಹದಾಯಿಯಿಂದ ಒಂದು ಹನಿಯೂ ನೀರು ಬಿಡುವುದಿಲ್ಲ: ಸೋನಿಯಾ ಹೇಳಿಕೆ ಪ್ರಸ್ತಾಪಿಸಿದ ಅಂಗಡಿ

Webdunia
ಗುರುವಾರ, 28 ಜುಲೈ 2016 (14:47 IST)
ಮಹದಾಯಿಯಿಂದ ಒಂದು ಹನಿಯೂ ನೀರು ಬಿಡುವುದಿಲ್ಲ ಎಂದು 2006 ರ ಸಾಲಿನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹೇಳಿದ್ದರು ಎಂದು ಬಿಜೆಪಿ ಸಂಸದ ಸುರೇಶ್ ಅಂಗಡಿ ಆರೋಪಿಸಿದ್ದಾರೆ.
 
ಸಂಸದ ಸುರೇಶ ಅಂಗಡಿ ಆರೋಪಕ್ಕೆ ಸಂಸದ ಪ್ರಕಾಶ್ ಹುಕ್ಕೇರಿ ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು.
 
ಮಹದಾಯಿ ನ್ಯಾಯಾಧಿಕರಣದಲ್ಲಿ ಕರ್ನಾಟಕಕ್ಕೆ ಹಿನ್ನೆಡೆಯಾದ ಹಿನ್ನೆಲೆಯಲ್ಲಿ ಇಂದು ಲೋಕಸಭೆಯಲ್ಲಿ ಸಂಸದ ಪ್ರಕಾಶ್ ಹುಕ್ಕೇರಿ ಮಹದಾಯಿ ವಿಚಾರವನ್ನು ಪ್ರಸ್ತಾಪಿಸಿದರು.
 
ಮಹದಾಯಿ ನ್ಯಾಯಾಧಿಕರಣದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದರು.
 
ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಧಿಕರಣದ ಹೊರಗಡೆಯೇ ಪರಿಹರಿಸಬೇಕು. ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಯವರೊಂದಿಗೆ ಸಭೆ ಕರೆದು ಮಾತನಾಡಲಿ ಎಂದು ಸಲಹೆ ನೀಡಿದ್ದಾರೆ.
 
ನಿನ್ನೆ ಮಹದಾಯಿ ನ್ಯಾಯಾಧಿಕರಣ ಕರ್ನಾಟಕ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗುತ್ತಿದೆ. ಕೂಡಲೇ ಪ್ರಧಾನಿ ಅವರು ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲಿ ಎಂದು ಸಂಸದ ಪ್ರಕಾಶ್ ಹುಕ್ಕೇರಿ ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments