ಎಸ್ಸೆಸ್ಸೆಲ್ಸಿ: ಭರವಸೆ ಮೂಡಿಸಿದ ತೀರ್ಪು: ಸುರೇಶ್ ಕುಮಾರ್

Webdunia
ಸೋಮವಾರ, 12 ಜುಲೈ 2021 (16:30 IST)
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆ ರೂಪಿಸಿದ ಎಸ್ ಒ ಪಿ ಪಾಲನೆಗಳಂತಹ  ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಪುರಸ್ಕರಿಸಿ, ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದಿರುವ ಹೈಕೋರ್ಟ್ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿದೆ ಎಂದು ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 
ಇದು ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದ್ದು, ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಕಳೆದ ವರ್ಷವೂ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧದಲ್ಲಿ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರ ಸಲ್ಲಿಸಿದ್ದ ಎಸ್.ಎಲ್.ಪಿ. ಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು ಎಂದು ಅವರು ನೆನಪಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments