Publish Date: Sat, 09 Nov 2019 (09:46 IST)
Updated Date: Sat, 09 Nov 2019 (09:48 IST)
ಬೆಂಗಳೂರು: ಬಹುನಿರೀಕ್ಷಿತ ಅಯೋಧ್ಯೆ ವಿವಾದದ ಕುರಿತು ಇಂದು ಸುಪ್ರೀಕೋರ್ಟ್ ತೀರ್ಪು ನೀಡಲಿದೆ. ಈ ಹಿನ್ನಲೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಸುಪ್ರೀಂ ತೀರ್ಪು ಹಿನ್ನೆಲೆ ಮುಂಜಾಗೃತ ಕ್ರಮವಾಗಿ ರಜೆಯನ್ನು ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಹಾಗೇ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಗಡಿ ಪ್ರದೇಶದಲ್ಲೂ ಚಕ್ ಪೋಸ್ಟ್ ಗಳನ್ನು ಸ್ಥಾ ಪಿಸಲಾಗಿದೆ.