Publish Date: Mon, 19 Jul 2021 (09:14 IST)
Updated Date: Mon, 19 Jul 2021 (09:39 IST)
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು, ಇಂದು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖುದ್ದು ಭೇಟಿ ಮಾಡಿ ಪರಿಶೀಲನೆ ನಡೆಸಲಿದ್ದಾರೆ.
ಕೊರೋನಾ ಕಾರಣದಿಂದ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹತ್ತಿರವಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಪರೀಕ್ಷಾ ಕೇಂದ್ರಗಳನ್ನೂ ಹೆಚ್ಚಿಸಲಾಗಿದೆ.
ಹಾಗಿದ್ದರೂ ಹಲವೆಡೆ ಕೆಲವು ಕುಂದು ಕೊರತೆಗಳು ಕಂಡುಬಂದಿವೆ. ಎರಡು ದಿನಗಳಾಗಿ ಪರೀಕ್ಷೆ ನಡೆಯಲಿದೆ. ಒ.ಎಂ.ಆರ್. ಶೀಟ್ ನಲ್ಲಿ ಪರೀಕ್ಷೆ ನಡೆಯಲಿದೆ.