Webdunia - Bharat's app for daily news and videos

Install App

ದೆಹಲಿಗೆ ಸರ್ಪೈಸ್ ಮುಖ್ಯಮಂತ್ರಿ, ಮೋದಿ ಇಂದು ಘೋಷಣೆ

Krishnaveni K
ಭಾನುವಾರ, 9 ಫೆಬ್ರವರಿ 2025 (10:58 IST)
Photo Credit: X
ನವದೆಹಲಿ: ಭರ್ಜರಿ ಬಹುಮತ ಪಡೆದು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗದ್ದುಗೇರಿರುವ ಬಿಜೆಪಿಗೆ ಈಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಈ ನಡುವೆ ಇಂದು ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಅಚ್ಚರಿಯ ಅಭ್ಯರ್ಥಿ ಆಯ್ಕೆಯಾಗುವ ಸಾಧ್ಯತೆಯಿದೆ.

ನರೇಂದ್ರ ಮೋದಿ-ಅಮಿತ್ ಶಾ ಬಿಜೆಪಿಯ ಚುಕ್ಕಾಣಿ ಹಿಡಿದ ಬಳಿಕ ಹಲವು ರಾಜ್ಯಗಳಿಗೆ ಅಚ್ಚರಿಯ ಅಭ್ಯರ್ಥಿಯನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದ್ದರು. ಇದರಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡಾ ಒಬ್ಬರು. ಇದರಿಂದ ಪಕ್ಷಕ್ಕೆ ಲಾಭವೇ ಆಗಿದೆ.

ಈಗ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೂ ಹಲವರ ಹೆಸರು ಕೇಳಿಬರುತ್ತಿದೆ. ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಸೋಲಿಸಿದ ವೀರೇಂದ್ರ ಸಚ್ ದೇವ, ಮನೋಜ್ ತಿವಾರಿ, ವಿಜೇಂದ್ರ ಗುಪ್ತಾ,  ಆಶಿಶ್ ಸೂದ್, ಜಿತೇಂದ್ರ ಮಹಾಜನ್ ಇತ್ಯಾದಿ ಹೆಸರುಗಳು ಮುಖ್ಯಮಂತ್ರಿ ರೇಸ್ ನಲ್ಲಿವೆ.

ಇವರು ಯಾರೂ ಇದುವರೆಗೆ ಉನ್ನತ ಹುದ್ದೆಯನ್ನು ಅಲಂಕರಿಸಿ ಫೇಮಸ್ ಆದವರಲ್ಲ. ಹೀಗಾಗಿ ಇವರಲ್ಲೇ ಅರ್ಹರಿಗೆ ಮಣೆ ಹಾಕುವ ಮೂಲಕ ಅಚ್ಚರಿಯ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆಯಿದೆ. ಇಂದು ಮೋದಿ ನೇತೃತ್ವದಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಸಭೆ ನಡೆಯಲಿದ್ದು ಈ ವೇಳೆ ನೂತನ ಮುಖ್ಯಮಂತ್ರಿ ಯಾರು ಎಂದು ಘೋಷಣೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments