Webdunia - Bharat's app for daily news and videos

Install App

ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ: ಅಶೋಕ್

Webdunia
ಗುರುವಾರ, 20 ಜನವರಿ 2022 (13:55 IST)
ಬೆಂಗಳೂರು : ಕೇಂದ್ರ ಸರ್ಕಾರದ ಅನುದಾನದ ಮೂಲಕ ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 287 ಕೋಟಿ ರೂ.ಗಳ ವೆಚ್ಚದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ ಮಾಡಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಇಡುತ್ತೇವೆ. ಪ್ರಾಯೋಗಿಕವಾಗಿ 4 ಜಿಲ್ಲೆಗಳಲ್ಲಿ ಈ ಕಾರ್ಯ ಸದ್ಯದಲ್ಲೇ ಪ್ರಾರಂಭಿಸುತ್ತೇವೆ ಎಂದು ಮಾಹಿತಿ ನೀಡಿದರು.

ಕಂದಾಯ ಇಲಾಖೆಯ ಕಾರ್ಯಕ್ರಮದ ಕುರಿತು ಮಾತನಾಡಿ, ಇನಾಂತಿ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತರು ಅರ್ಜಿ ಹಾಕಿಕೊಳ್ಳಲು ಇನ್ನೂ ಒಂದು ವರ್ಷ ಅವಕಾಶ ಮಾಡಿಕೊಟ್ಟಿದ್ದೇನೆ. ಆ ಕುರಿತು ಗೆಜೆಟ್ ನೋಟಿಫಿಕೇಷನ್ ಆಗಿದೆ ಎಂದರು.

ಮುಖ್ಯಮಂತ್ರಿ ಮನೆಯ ಮುಂದೆ ಕಾಂಗ್ರೆಸ್ ಪ್ರತಿಭಟನೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ಯಾರಿಗೂ ಪ್ರತಿಭಟನೆ ಮಾಡುವುದಕ್ಕೇ ಬಿಡುತ್ತಿರಲಿಲ್ಲ. ನಮ್ಮದು ಪ್ರಜಾಪ್ರಭುತ್ವಕ್ಕೆ ಬೆಲೆ ಕೊಡುವ ಸರ್ಕಾರ. ಸಿಎಂ ನಿವಾಸದ ಮುಂದೆ ಪ್ರತಿಭಟನೆ ಮಾಡುವುದಾದರೆ ಸ್ವಾಗತ ಎಂದು ಪ್ರತಿಕ್ರಿಯಿಸಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments