ಆರೋಪಿಗಳಿಂದ ಸರ್ವೈವಲ್ ಟಾಸ್ಕ್

Webdunia
ಶುಕ್ರವಾರ, 22 ಸೆಪ್ಟಂಬರ್ 2023 (16:20 IST)
ಶಿವಮೊಗ್ಗ ತುಂಗಾತೀರದಲ್ಲಿ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ NIA ತನಿಖೆ ಮುಂದುವರಿಸಿದೆ.. ಹಲವು ವಿಚಾರಗಳು ಬೆಳಕಿಗೆ ಬರುತ್ತಿವೆ. ಅದರಂತೆ, ಆರೋಪಿಗಳು ಸರ್ವೈವಲ್ ಟಾಸ್ಕ್​​ ಮಾಡಿದ್ದು, ಗೂಗಲ್​ನಲ್ಲಿ ಬಾಂಬ್ ತಯಾರಿಸುವ ವಿಧಾನದ ಬಗ್ಗೆ ತಿಳಿದುಕೊಂಡಿರುವುದು ತಿಳಿದುಬಂದಿದೆ. ವಿಚಾರಣೆ ವೇಳೆ, ಸರ್ವೈವಲ್ ಟಾಸ್ಕ್ ಮಾಡಿದ್ದನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಪೊಲೀಸ್, ತನಿಖಾ ಸಂಸ್ಥೆಯಿಂದ ತಪ್ಪಿಸಿಕೊಳ್ಳಲೂ ವಿಶೇಷ ತರಬೇತಿ ನೀಡಲಾಗುತ್ತದೆ. ಇದನ್ನೇ ಸರ್ವೈವಲ್ ಟಾಸ್ಕ್ ಎನ್ನುತ್ತಾರೆ. ಕಾಡುಗಳಲ್ಲಿ ತಲೆಮರೆಸಿಕೊಂಡು ಎರಡು ಮೂರು ದಿನ ಊಟ ನಿದ್ದೆ ಇಲ್ಲದೆ ಇರುವಂತದ್ದೇ ಸರ್ವೈವಲ್ ಟಾಸ್ಕ್​ ಆಗಿದ್ದು, ಇಂತಹ ಟಾಸ್ಕ್​ಗಾಗಿ ಕಾಡುಗಳಲ್ಲಿ ಕೆಲ ದಿನಗಳ ಕಾಲ ತರಬೇತಿ ನೀಡಲಾಗುತ್ತಿತ್ತು ಎಂಬ ವಿಚಾರವನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಮಂಗಳೂರು ಕುಕ್ಕರ್ ಸ್ಫೋಟ ಬಳಿಕ ಆರೋಪಿ ಶಾರೀಕ್ ಇದೇ ರೀತಿ ಸರ್ವೈವಲ್ ಟಾಸ್ಕ್​ನಲ್ಲಿ ತೊಡಗುವ ಉದ್ದೇಶ ಹೊಂದಿದ್ದ. ಅರಣ್ಯ ಪ್ರದೇಶದಿಂದ ಕೆಲ ದಿನಗಳ ಬಳಿಕ ಬೇರೆ ಪಾಸ್ ಪೋರ್ಟ್ ಮೂಲಕ ವಿದೇಶಕ್ಕೆ ಪರಾರಿಯಾಗುವ ಪ್ಲಾನ್ ಮಾಡಿದ್ದರು. ಅಲ್ಲದೆ, ಮೊಬೈಲ್​ನಲ್ಲಿ ಬಾಂಬ್ ತಯಾರಿಸುವುದು ಹೇಗೆ ಎಂದು ಗೂಗಲ್​ನಲ್ಲಿ ಹುಡುಕಾಟ ನಡೆಸಿದ್ದು ಕೂಡ ವಿಚಾರಣೆ ವೇಳೆ ತಿಳಿದುಬಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಡಿಕೆ ಶಿವಕುಮಾರ್ ಕೈಗೆ ಸಿಗದ ರಾಹುಲ್ ಗಾಂಧಿ ಬೇರೆ ನಾಯಕರನ್ನು ಭೇಟಿ ಮಾಡ್ತಿರೋದು ಯಾಕೆ

Karnataka Weather: ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ಮುಂದಿನ ಸುದ್ದಿ
Show comments