Webdunia - Bharat's app for daily news and videos

Install App

ಕೊರೋನಾ ವೈರಸ್ ಶಂಕಿತ ಸಾವು: ಸರಕಾರ ಹೇಳುತ್ತಿರೋದೇನು?

Webdunia
ಬುಧವಾರ, 11 ಮಾರ್ಚ್ 2020 (18:39 IST)
ಸೌದಿ ಅರೇಬಿಯಾ ಪ್ರವಾಸ ಮುಗಿಸಿಕೊಂಡು ಹಿಂದಿರುಗಿದ ಮತ್ತು ವಯೋಸಹಜದಿಂದ ಶ್ವಾಸಕೋಶದ ತೊಂದರೆ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವುದಕ್ಕೆ ಸರಕಾರ ಸ್ಪಷ್ಟನೆ ನೀಡಿದೆ.

ಕಲಬುರಗಿ ನಗರದ ಮಹ್ಮದ್ ಹುಸೇನ್ ಸಿದ್ದಿಕಿ (ವಯಸ್ಸು 76) ಅವರು ಮಾರ್ಚ್ 10 ರಂದು ನಿಧನರಾಗಿದ್ದು, ಕರೋನಾ ವೈರಸ್‍ನಿಂದ ನಿಧನವಾಗಿದ್ದಾರೆ ಎಂಬುದಕ್ಕೆ ವೈದ್ಯಕೀಯ ವರದಿ ಇನ್ನೂ ದೃಢೀಕರಿಸಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಸ್ಪಷ್ಟನೆ ನೀಡಿದ್ದಾರೆ.

ಮಹ್ಮದ್ ಹುಸೇನ್ ಸಿದ್ದಿಕಿ ಅವರು ಮಾರ್ಚ್ 9 ರಂದು ಶ್ವಾಸಕೋಶದ ತೊಂದರೆ, ಕೆಮ್ಮು, ಜ್ವರ ಅತಿಯಾಗಿ ಕಾಣಿಸಿದ್ದರಿಂದ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ತದನಂತರ ಅದೇ ದಿನದಂದು ರಾತ್ರಿ ವ್ಯದ್ಯಕೀಯ ಸಲಹೆ ಕಡೆಗಣಿಸಿ ಕುಟುಂಬಸ್ಥರು ರೋಗಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ಹೈದ್ರಾಬಾದಿನ “ಕೇರ್ ಹಾಸ್ಪಿಟಲ್” ಎಂಬ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು.

 ಅಲ್ಲಿಯೂ ಗುಣಮುಖ ಕಾಣದ ಹಿನ್ನೆಲೆಯಲ್ಲಿ  ಕುಟುಂಬಸ್ಥರು ರೋಗಿಯನ್ನು ಹೈದ್ರಾಬಾದಿನ ಅಸ್ಪತ್ರೆಯಿಂದ ಮಾರ್ಚ್ 10 ರಂದು ಮಧ್ಯಾಹ್ನ ಡಿಸ್‍ಚಾರ್ಜ್ ಮಾಡಿಕೊಂಡು ಕಲಬುರಗಿಗೆ ಬರುವ ಮಾರ್ಗಮಧ್ಯದಲ್ಲಿಯೇ ರೋಗಿ ನಿಧನರಾಗಿರುತ್ತಾರೆ ಎಂದು ಡಿ.ಸಿ. ಶರತ್ ಬಿ. ಮಾಹಿತಿ ನೀಡಿದರು.

ಕೆಮ್ಮು, ಜ್ವರದಿಂದ ವ್ಯಕ್ತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾದ ಕೂಡಲೇ ಇದನ್ನು ಶಂಕಿತ ಕೊರೋನಾ ವೈರಸ್ ಎಂದು ಭಾವಿಸಿಕೊಂಡು ಮಾರ್ಚ್ 9 ರಂದೇ ವ್ಯಕ್ತಿಯ ಗಂಟಲು ದ್ರವ್ಯ ಸ್ಯಾಂಪಲ್ ಪಡೆದು ಬೆಂಗಳೂರಿನ ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ವೈರಾಲಾಜಿ ಇಲ್ಲಿಗೆ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಇನ್ನೂ ವರದಿ ಬಂದಿಲ್ಲ ಎಂದರು.

ಇನ್ನು ನಿಧನ ಹೊಂದಿದ ವ್ಯಕ್ತಿ ಕುಟುಂಬಸ್ಥರು ಮತು ಸಂಬಂಧಿಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಇದುವರೆಗೆ ಅವರ ಕುಟುಂಬದ ಸದಸ್ಯರಲ್ಲಿ ಶಂಕಿತ ಕೊರೋನಾ ವೈರಸ್‍ನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದ ಜಿಲ್ಲಾಧಿಕಾರಿಗಳು ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments