Webdunia - Bharat's app for daily news and videos

Install App

ವೇಶ್ಯಾವಾಟಿಕೆ ಶಂಕೆ: ಮಹಿಳೆಯರಿಬ್ಬರನ್ನು ರಸ್ತೆಗೆಳೆದು ಬಟ್ಟೆ ಹರಿದು ಹಲ್ಲೆ

Sampriya
ಶನಿವಾರ, 16 ನವೆಂಬರ್ 2024 (15:09 IST)
ಬೆಳಗಾವಿ: ಮಹಿಳೆಯರಿಬ್ಬರನ್ನು ರಸ್ತೆಗೆ ಎಳೆದು ಬಟ್ಟೆ ಹರಿದು ಹಲ್ಲೆ ಮಾಡಿದ ಘಟನೆ ಮಾಳಮಾರುತು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಈ ಸಂಬಂಧ ಅಷ್ಟೇಕರ್, ಹೂವಪ್ಪ ಅಷ್ಟೇಕರ್, ಮಣಿಕಂಠ ಅಷ್ಟೇಕರ್ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಾಗಿದೆ.  ಇಲ್ಲಿನ ವಡ್ಡರವಾಡಿ ಪ್ರದೇಶದಲ್ಲಿ ಮಹಿಳೆಯರಿಬ್ಬರನ್ನು ರಸ್ತೆಗೆ ಎಳೆದು ತಂದು ಬಟ್ಟೆ ಹರಿದು ಹಲ್ಲೆ ಮಾಡಿದ ಘಟನೆ ಸೋಮವಾರ ರಾತ್ರಿ 11ಕ್ಕೆ ನಡೆದಿದೆ.  ಶನಿವಾರ ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ವಡ್ಡರವಾಡಿಯ ಮಹಿಳೆಯೊಬ್ಬರನ್ನು ಮಹಾರಾಷ್ಟ್ರಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಪತಿ ಮನೆಯ ಕಿರುಕುಳದಿಂದ ಮಹಿಳೆ ತಾಯಿ ಜತೆಯಲ್ಲಿ  ವಾಸವಾಗಿದ್ದಾಳೆ. ಅವರ ಪರಿಚಯಸ್ಥರು ಪದೇಪದೇ ಮನೆಗೆ ಬರುತ್ತಿರುವುದನ್ನು ಕಂಡು, ವೇಶ್ಯಾವಾಟಿಕೆ ನಡೆಸುತ್ತಿರುವ ಅನುಮಾನದಿಂದ ಮೂವರೂ ಹಲ್ಲೆ ಮಾಡಿದ್ದಾರೆ ಎಂದು ಮಹಿಳೆಯರು ದೂರಿನಲ್ಲಿ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ತಮ್ಮ ತಾಯಿಯ ಕೂದಲು ಹಿಡಿದು ಹೊರಗೆ ಎಳೆದು ತಂದರು. ನನ್ನನ್ನೂ ಎಳೆದಾಡಿ ಬಟ್ಟೆ ಹರಿದರು. ವಿವಸ್ತ್ರಗೊಳಿಸಿ ಹಲ್ಲೆ ಮಾಡಿದರು ಎಂದೂ ಮಹಿಳೆ ನೀಡಿದ ದೂರಿನಲ್ಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments