Select Your Language

Notifications

webdunia
webdunia
webdunia
webdunia

ಶ್ರೀಗಳ ಸಾವಿನ ಸುತ್ತ ಅನುಮಾನ! 3 ಪುಟಗಳ ಡೆತ್ನೋಟ್ ರಹಸ್ಯ ಬಯಲು!

ಶ್ರೀಗಳ ಸಾವಿನ ಸುತ್ತ ಅನುಮಾನ! 3 ಪುಟಗಳ ಡೆತ್ನೋಟ್ ರಹಸ್ಯ ಬಯಲು!
ಬೆಂಗಳೂರು , ಮಂಗಳವಾರ, 25 ಅಕ್ಟೋಬರ್ 2022 (08:50 IST)
ರಾಮನಗರ : ರೇಷ್ಮೆನಾಡು ರಾಮನಗರದಲ್ಲಿ ಸ್ವಾಮೀಜಿಗಳ ಸರಣಿ ಆತ್ಮಹತ್ಯೆ ಮುಂದುವರಿದಿದೆ.

ಕಳೆದ ತಿಂಗಳು ಮನನೊಂದು ಮಾಗಡಿಯ ಚಿಲುಮೆ ಮಠದ ಸ್ವಾಮಿಜೀಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಕಂಚುಗಲ್ ಬಂಡೆಮಠದ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಶ್ರೀಗಳ ಆತ್ಮಹತ್ಯೆ ಸುತ್ತ ಅನುಮಾನಗಳ ಹುತ್ತ ಬೆಳೆದಿದೆ. ಮಠದ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಬ್ಬಕ್ಕೆ ಬೆಂಗ್ಳೂರಿನಿಂದ ವಿಶೇಷ ರೈಲು ಸೇವೆ