Select Your Language

Notifications

webdunia
webdunia
webdunia
webdunia

ಬೀದರ್‌ನಲ್ಲಿ ಪಾರದರ್ಶಕ ಚುನಾವಣೆ ನಡೆಯೋದು ಅನುಮಾನ: ಖೂಬಾ

ಬೀದರ್‌ನಲ್ಲಿ ಪಾರದರ್ಶಕ ಚುನಾವಣೆ ನಡೆಯೋದು ಅನುಮಾನ: ಖೂಬಾ
ಬೆಂಗಳೂರು , ಗುರುವಾರ, 10 ಮೇ 2018 (13:37 IST)
ಚುನಾವಣಾಧಿಕಾರಿಗಳು ಉತ್ತಮವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಲ್ಲ. ಪಾರದರ್ಶಕ ಚುನಾವಣೆ ನಡೆಸುವಲ್ಲಿ ಪೊಲೀಸ್, ಹಾಗೂ ಚುನಾವಣಾ ಅಧಿಕಾರಿಗಳು ವಿಫಲಾಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಸಂಸದ ಖೂಬಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಾರದರ್ಶಕ ಚುನಾವಣೆ ಜಿಲ್ಲೆಯಲ್ಲಿ ನಡೆಯುತ್ತೋ ಇಲ್ಲವೋ ಅನ್ನೋ ಅನುಮಾನ ಮುಡುತ್ತಿದೆ, ನಿನ್ನೆ ಸುಭಾಶ್ ಕಲ್ಲೂರ್ ಕಾರಿನ ಮೇಲೆ ಕಲ್ಲೂ ತೂರಲಾಗಿದೆ. ಭಾಲ್ಕಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಈಶ್ವರ ಖಂಡ್ರೆ, ಪ್ರಕಾಶ್ ಖಂಡ್ರೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಸೋಲುವ ಭೀತಿಯಿಂದ ಹಣ ಹಂಚುವ ಕೆಲಸ ಮಾಡುತ್ತಿದೆ.ಹೀಗಾಗಿ ಜಿಲ್ಲೆಯಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನವಾಗಿದೆ. ಹೀಗಾಗಿ ರಾಜ್ಯ ಚುನಾಚಣಾ ಆಯುಕ್ತರಿಗೆ ದೂರು ಕೊಡಲಾಗುವುದು ಎಂದು ಸಂಸದ ಭಗವಂತ್ ಖೂಬಾ ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪಗೆ ವಯಸ್ಸಾಗಿದೆ ಎಂದ ಎಂ.ಬಿ.ಪಾಟೀಲ್