ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

Sampriya
ಸೋಮವಾರ, 4 ಆಗಸ್ಟ್ 2025 (19:24 IST)
Photo Credit X
ಬೆಂಗಳೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿಯ ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳ ಸಂಶಯಾಸ್ಪದ ಸಾವು ಸಂಬಂಧ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ.

ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಮ್ಮ ರಾಷ್ಟ್ರಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು. 

ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದ ಘಟನೆ ನಡೆದಿತ್ತು. ಈಗ ನಮ್ಮ ರಾಷ್ಟ್ರಪಕ್ಷಿ ನವಿಲಿನ ಮಾರಣ ಹೋಮ ನಡೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ. 

ನವಿಲುಗಳ ಸಾವಿಗೆ ಕೀಟನಾಶಕಗಳ ಸೇವನೆ ಕಾರಣ ಎಂದು ಮಾಧ್ಯಮಗಳು ವರದಿ ಮಾಡಿತ್ತು. ಕೀಟನಾಶಕವನ್ನು ನವಿಲುಗಳನ್ನು ಸಾಯಿಸಲೆಂದೇ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ಡಿಸಿಎಫ್ ನೇತೃತ್ವದ ತಂಡದಿಂದ ತನಿಖೆ ನಡೆಸಿ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮತ್ತು ನಿಯಮಾನುಸಾರ ಕ್ರಮ ಜರುಗಿಸಲು ಸೂಚಿಸಿದ್ದಾರೆ. 

ಜೊತೆಗೆ ಪರಿಶಿಷ್ಟ 1 ಮತ್ತು 2ರ ಯಾವುದೇ ವನ್ಯಜೀವಿ ಮೃತಪಟ್ಟರೂ ಆಡಿಟ್ ಮಾಡಿಸಿ ತಕ್ಷಣವೇ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಲು ಕ್ರಮ ವಹಿಸಲು ನಿರ್ದೇಶನ ನೀಡಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Bihar election result live: ಬಿಹಾರದಲ್ಲಿ ಎನ್ ಡಿಎ ಹೇಗೆ ಗೆಲ್ತಿದೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments