Select Your Language

Notifications

webdunia
webdunia
webdunia
Thursday, 10 April 2025
webdunia

ಅನುಮಾನಾಸ್ಪದವಾಗಿ ಚಿರತೆ ಸಾವು

ವೈದ್ಯಾಧಿಕಾರಿ
ನಂಜನಗೂಡು , ಶುಕ್ರವಾರ, 13 ಅಕ್ಟೋಬರ್ 2023 (18:20 IST)
ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಡಿಯಾಲ ಮತ್ತು ಚಂಗೌಡನಹಳ್ಳಿಗೆ ಹೋಗುವ ರಸ್ತೆಯ ಪಕ್ಕದ ಜಮೀನೊಂದರಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. ಸಾವಿಗೆ ನಿಕರವಾದ ಮಾಹಿತಿ ತಿಳಿದು ಬಂದಿಲ್ಲ. ಅಲ್ಲಲ್ಲಿ ಚಿರತೆಯ ಹೆಜ್ಜೆಯ ಗುರುತು ಇರುವುದರಿಂದ ಅನುಮಾನ ವ್ಯಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಕಾಡಿನಿಂದ ನಾಡಿಗೆ ಬರುತ್ತಿದ್ದು, ಸಾರ್ವಜನಿಕರ ನಿದ್ರೆಗೆಡಿಸಿದ್ದು, ರೈತರು, ಮಹಿಳೆಯರು ಭಯಭೀತರಾಗಿ ಜಮೀನುಗಳಿಗೆ ತೆರಳಲು ಇಂದೇಟು ಹಾಕುತ್ತಿದ್ದಾರೆ.ಆದರೆ ಈ ಚಿರತೆ ಸುಮಾರು 03 ವರ್ಷದ ಹೆಣ್ಣು ಚಿರತೆಯಾಗಿದ್ದು, ಯಾರೋ ಕಿಡಿಗೇಡಿಗಳು ಸಾಯಿಸಿ ತಂದು ಬಿಸಾಡಿರಬಹುದೇನೋ..? ಅಥವಾ ವಿಷ ಸೇವಿಸಿ ಪ್ರಾಣ ಕಳೆದು ಕೊಂಡಿರಬಹುದೇ..? ಎಂಬ ಅನುಮಾನ ವ್ಯಕ್ತವಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಅರಣ್ಯಧಿಕಾರಿಗಳಾದ ನಾರಾಯಣ್, ಬಂಡೀಪುರ ವೈದ್ಯಾಧಿಕಾರಿಗಳಾದ ಡಾ. ಮಿರ್ಜಾ ವಸೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಯ ರವಾನೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದು ಸರ್ಕಾರ ನಡೆಸಿದ್ದು ಮೊದಲು ಸ್ಪಷ್ಟಪಡಿಸಲಿ- ಬೊಮ್ಮಾಯಿ