Webdunia - Bharat's app for daily news and videos

Install App

ಅನುಮಾನಾಸ್ಪದವಾಗಿ ಚಿರತೆ ಸಾವು

Webdunia
ಶುಕ್ರವಾರ, 13 ಅಕ್ಟೋಬರ್ 2023 (18:20 IST)
ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಡಿಯಾಲ ಮತ್ತು ಚಂಗೌಡನಹಳ್ಳಿಗೆ ಹೋಗುವ ರಸ್ತೆಯ ಪಕ್ಕದ ಜಮೀನೊಂದರಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. ಸಾವಿಗೆ ನಿಕರವಾದ ಮಾಹಿತಿ ತಿಳಿದು ಬಂದಿಲ್ಲ. ಅಲ್ಲಲ್ಲಿ ಚಿರತೆಯ ಹೆಜ್ಜೆಯ ಗುರುತು ಇರುವುದರಿಂದ ಅನುಮಾನ ವ್ಯಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಕಾಡಿನಿಂದ ನಾಡಿಗೆ ಬರುತ್ತಿದ್ದು, ಸಾರ್ವಜನಿಕರ ನಿದ್ರೆಗೆಡಿಸಿದ್ದು, ರೈತರು, ಮಹಿಳೆಯರು ಭಯಭೀತರಾಗಿ ಜಮೀನುಗಳಿಗೆ ತೆರಳಲು ಇಂದೇಟು ಹಾಕುತ್ತಿದ್ದಾರೆ.ಆದರೆ ಈ ಚಿರತೆ ಸುಮಾರು 03 ವರ್ಷದ ಹೆಣ್ಣು ಚಿರತೆಯಾಗಿದ್ದು, ಯಾರೋ ಕಿಡಿಗೇಡಿಗಳು ಸಾಯಿಸಿ ತಂದು ಬಿಸಾಡಿರಬಹುದೇನೋ..? ಅಥವಾ ವಿಷ ಸೇವಿಸಿ ಪ್ರಾಣ ಕಳೆದು ಕೊಂಡಿರಬಹುದೇ..? ಎಂಬ ಅನುಮಾನ ವ್ಯಕ್ತವಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಅರಣ್ಯಧಿಕಾರಿಗಳಾದ ನಾರಾಯಣ್, ಬಂಡೀಪುರ ವೈದ್ಯಾಧಿಕಾರಿಗಳಾದ ಡಾ. ಮಿರ್ಜಾ ವಸೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಯ ರವಾನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments