Webdunia - Bharat's app for daily news and videos

Install App

ಮನೆ ಸುತ್ತಾ ಅನುಮಾನಸ್ಪದ ವ್ಯಕ್ತಿಗಳ ಓಡಾಟ: ಭದ್ರತೆ ಬೇಕೆಂದ ನೇಹಾ ತಂದೆ ನಿರಂಜನಯ್ಯ

Sampriya
ಗುರುವಾರ, 25 ಏಪ್ರಿಲ್ 2024 (14:17 IST)
Photo Courtesy X
ಹುಬ್ಬಳ್ಳಿ: ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ತನ್ನ ಸ್ನೇಹಿತನಿಂದಲೇ ಹತ್ಯೆಗೀಡಾದ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಅವರು  ತಮ್ಮ ಜೀವಕ್ಕೂ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಂದು ತಮ್ಮ ಬಿಡನಾಳದಲ್ಲಿರುವ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ನಡೆದು ರಾಷ್ಟ್ರಮಟ್ಟದಲ್ಲಿ ಸುದ್ದಿ ಆಗಿದೆ. ಈ ಹಿನ್ನೆಲೆ ನಮ್ಮ ಮನೆಗೆ ಅನೇಕ ಗಣ್ಯ ವ್ಯಕ್ತಿಗಳು ಭೇಟಿ ನೀಡಿ ಸಾಂತ್ವನ ನೀಡುತ್ತಿದ್ದಾರೆ. ಈ ವೇಳೆ ಸಂಶಯಾಸ್ಪದ ವ್ಯಕ್ತಿಗಳೂ ಕಂಡು ಬರುತ್ತಿದೆ. ಇದರಿಂದ ನನ್ನ ಜೀವಕ್ಕೂ ಅಪಾಯವಿರುವ ಮುನ್ಸೂಚನೆ ಸಿಗುತ್ತಿದ್ದು, ನನ್ನ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು' ಎಂದು ನಿರಂಜನಯ್ಯ ಹಿರೇಮಠ ಹೇಳಿದರು.

ನಮಗೆ ಸಾಂತ್ವನ ಹೇಳುವ ನೆಪದಲ್ಲಿ ಮನೆಯ ಸುತ್ತಾ ಮುತ್ತಾ ಅನುಮನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆ ಮನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಸೂಕ್ತ ಭದ್ರತೆ ಒದಗಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗುವುದು ಎಂದರು.

ನೇಹಾ ಹತ್ಯೆಗೂ ಮುನ್ನಾ ಫಯಾಜ್ ತನ್ನ ಸ್ನೇಹಿತರೊಂದಿಗೆ ನಮ್ಮ ಮನೆ ಸುತ್ತಾ ಸುತ್ತಾಡಿದ್ದ. ಅದಲ್ಲದೆ ಮಗಳಿಗೆ ಕರೆ ಮಾಡಿ ಜೀವ ಬೆದರಿಕೆಯನ್ನು ಹಾಕಿದ್ದ. ಅಪಹರಿಸಲು ಯತ್ನಿಸಿದ್ದು, ಇದೊಂದು ವ್ಯವಸ್ಥಿತ ಕೃತ್ಯವಾಗಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments