Webdunia - Bharat's app for daily news and videos

Install App

ಸ್ವಾಮಿ ಗಂಗೇಶಾನಂದರ ಮರ್ಮಾಂಗ ಕತ್ತರಿ-ಕೊನೆಗೂ ಬಯಲಾಯ್ತು 5 ವರ್ಷಗಳ ಹಿಂದಿನ ಸಂಚು!

Webdunia
ಬುಧವಾರ, 23 ಫೆಬ್ರವರಿ 2022 (20:56 IST)
ಈ ಪ್ರಕರಣ ನಡೆದು 5 ವರ್ಷಗಳ ಬಳಿಕ ಪ್ರಕರಣದ ದೂರುದಾರ ಯುವತಿ ತನ್ನ ಸ್ನೇಹಿತನಾಗಿದ್ದ ಸ್ವಾಮಿಯ ಶಿಷ್ಯ ಅಯ್ಯಪ್ಪದಾಸ್ ಜತೆ ಸೇರಿ ಸ್ವಾಮಿ ಗಂಗೇಶಾನಂದ ಅವರ ಗುಪ್ತಾಂಗ ಕತ್ತರಿಸಲು ಸಂಚು ರೂಪಿಸಿದ್ದಳು ಎಂದು ತನಿಖೆಯಲ್ಲಿ ದೃಢಪಟ್ಟಿದೆ.ರುವನಂತಪುರಂ: ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದ ಯುವತಿಯೊಬ್ಬರು 2017ರಲ್ಲಿ ಕೇರಳದ ತಿರುವನಂತಪುರದ ಸ್ವಾಮಿ ಗಂಗೇಶಾನಂದ (Swami Gangeshananda) ಅವರ ಮರ್ಮಾಂಗವನ್ನೇ (Genitals) ಕತ್ತರಿಸಿದ್ದಾಗಿ ಹೇಳಿಕೆ ನೀಡಿದ್ದರು. ಆದರೆ, ನಂತರ ಪ್ಲೇಟ್ ತಿರುವಿ ಹಾಕಿದ್ದರು. ಆ ಆಘಾತಕಾರಿ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಕೇರಳ ಪೊಲೀಸ್ ಕ್ರೈಂ ಬ್ರಾಂಚ್ ತಂಡ ಆತನ ಮೇಲೆ ಹಲ್ಲೆ ಆರೋಪ ಮಾಡಿದ ಯುವತಿಯೇ ಆತನ ಗುಪ್ತಾಂಗವನ್ನು ಕತ್ತರಿಸಿದ್ದಾಳೆ ಎಂದು ಬಹಿರಂಗಪಡಿಸಿದೆ. ಈ ಪ್ರಕರಣ ನಡೆದು 5 ವರ್ಷಗಳ ಬಳಿಕ ಪ್ರಕರಣದ ದೂರುದಾರ ಯುವತಿ ತನ್ನ ಸ್ನೇಹಿತನಾಗಿದ್ದ ಸ್ವಾಮಿಯ ಶಿಷ್ಯ ಅಯ್ಯಪ್ಪದಾಸ್ ಜತೆ ಸೇರಿ ಸ್ವಾಮಿ ಗಂಗೇಶಾನಂದ ಅವರ ಗುಪ್ತಾಂಗ ಕತ್ತರಿಸಲು ಸಂಚು ರೂಪಿಸಿದ್ದಳು ಎಂದು ತನಿಖೆಯಲ್ಲಿ ದೃಢಪಟ್ಟಿದೆ.
 
ಸ್ವಾಮಿ ಗಂಗೇಶಾನಂದ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ಆರೋಪಿಸಿದ್ದು, ಅದರಿಂದಲೇ ಆತನ ಗುಪ್ತಾಂಗವನ್ನು ಕತ್ತರಿಸಿದ್ದೇನೆ ಎಂದಿದ್ದಳು. ಬಳಿಕ, ಇದ್ದಕ್ಕಿದ್ದಂತೆ ಗಂಗೇಶಾನಂದರ ಪರ ಹೇಳಿಕೆ ನೀಡಿದ್ದ ಆಕೆ ಆತ ಮಲಗಿದ್ದ ವೇಳೆ ಯಾರೋ ಅವರ ಮೇಲೆ ಹಲ್ಲೆ ನಡೆಸಿ ಗುಪ್ತಾಂಗವನ್ನು ಕತ್ತರಿಸಿದ್ದಾರೆ ಎಂದು ಆರೋಪಿಸಿದ್ದಳು. ಆದರೆ, ಇದೀಗ ಗಂಗೇಶಾನಂದ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿರುವ ಯುವತಿಯೇ ಆತನ ಗುಪ್ತಾಂಗವನ್ನು ಕತ್ತರಿಸಿದ ವ್ಯಕ್ತಿ ಎಂಬ ತೀರ್ಮಾನಕ್ಕೆ ಪೊಲೀಸರು ಬಂದಿದ್ದಾರೆ.2017ರ ಮೇ 30ರಂದು 19 ವರ್ಷದವಳಾಗಿದ್ದ ಕಾನೂನು ವಿದ್ಯಾರ್ಥಿನಿಯ ಮನೆಯಲ್ಲಿ ಗಂಗೇಶಾನಂದ ಅತಿಥಿಯಾಗಿ ತಂಗಿದ್ದ ವೇಳೆ ಈ ಘಟನೆ ನಡೆದಿತ್ತು. ಆರಂಭದಲ್ಲಿ, ಆ ಯುವತಿ ತನ್ನ ಅತ್ಯಾಚಾರಕ್ಕೆ ಯತ್ನಿಸಿದಾಗ ಆತನ ಗುಪ್ತಾಂಗವನ್ನು ಕತ್ತರಿಸಿದ್ದೇನೆ ಎಂದು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಳು. ಇದರಿಂದಾಗಿ ಸ್ವಾಮಿ ಗಂಗೇಶಾನಂದರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
 
ಬಳಿಕ, ಗಂಗೇಶಾನಂದ ಅವರೇ ತಮ್ಮ ಜನನಾಂಗವನ್ನು ಕತ್ತರಿಸಿಕೊಂಡಿದ್ದಾರೆ ಎಂದು ಹೇಳಿದ್ದರು. ಆದರೆ, ಬಳಿಕ ತಾನು ಮಲಗಿದ್ದಾಗ ಬೇರೊಬ್ಬರು ಅವರ ಗುಪ್ತಾಂಗವನ್ನು ಕತ್ತರಿಸಿದ್ದಾರೆ ಎಂದು ತಿದ್ದುಪಡಿ ಮಾಡಿದ್ದರು. ಗಂಗೇಶಾನಂದ ತನ್ನ ಮೇಲೆ ಹಲ್ಲೆಗೆ ಪ್ರಯತ್ನಿಸಲಿಲ್ಲ ಅಥವಾ ಕೊಲ್ಲಲು ಪ್ರಯತ್ನಿಸಲಿಲ್ಲ ಎಂದು ಆ ಯುವತಿ ತನ್ನ ಹೇಳಿಕೆಯನ್ನು ಬದಲಾಯಿಸಿದ್ದರು. ಗಂಗೇಶಾನಂದ ಅವರ ಶಿಷ್ಯ ಅಯ್ಯಪ್ಪದಾಸ್ ಅವರೇ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧವೂ ದೂರು ದಾಖಲಿಸಿದ್ದರು.
 
ಬಳಿಕ, ಗಂಗೇಶಾನಂದ ಅವರು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ವೇಳೆ ಗಂಗೇಶಾನಂದ ಪರವಾಗಿ ಆ ಯುವತಿ ಹೇಳಿಕೆ ನೀಡಿದ್ದರು. ಈ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲು ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಡಿಜಿಪಿಗೆ ದೂರು ಸಲ್ಲಿಸಿದ್ದರು. ಇದರಿಂದಾಗಿ ಆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು.
 
ಇದರ ಬೆನ್ನಲ್ಲೇ ಅಪರಾಧ ವಿಭಾಗದ ಪೊಲೀಸರು ಒಂದು ವರ್ಷದಿಂದ ಪ್ರಕರಣದ ತನಿಖೆ ನಡೆಸಿದ್ದು, ಮಹಿಳೆಯೇ ಅಯ್ಯಪ್ಪದಾಸ್ ಸಹಾಯದಿಂದ ಗಂಗೇಶಾನಂದನ ಗುಪ್ತಾಂಗವನ್ನು ಕತ್ತರಿಸಿದ್ದಾಳೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಆ ಯುವತಿ ಅಯ್ಯಪ್ಪ ದಾಸ್​ನನ್ನು ಪ್ರೀತಿ ಮಾಡುತ್ತಿದ್ದಳು. ತಮ್ಮಿಬ್ಬರ ಮದುವೆಗೆ ಸ್ವಾಮಿ ಗಂಗೇಶಾನಂದ ತೊಂದರೆ ಮಾಡುತ್ತಾರೆ ಎಂಬ ಭಯದಲ್ಲಿ ಅವರನ್ನು ಕೊಲೆ ಮಾಡಲು ಇಬ್ಬರೂ ಸಂಚು ರೂಪಿಸಿದ್ದರು. ಗುಪ್ತಾಂಗವನ್ನು ಕತ್ತರಿಸುವುದು ಹೇಗೆಂದು ವಿಡಿಯೋದಲ್ಲಿ ನೋಡಿದ್ದ ಅವರು ಅದೇ ರೀತಿ ಗಂಗೇಶಾನಂದ ರಾತ್ರಿ ಮಲಗಿದ್ದಾಗ ಅವರ ಮರ್ಮಾಂಗವನ್ನು ಕತ್ತರಿಸಿದ್ದಾರೆ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ