Select Your Language

Notifications

webdunia
webdunia
webdunia
webdunia

ಈಶ್ವರಪ್ಪ- ಯಡಿಯೂರಪ್ಪ ಭಿನ್ನಮತ ಪರಿಹಾರಕ್ಕೆ ಮಠಾಧೀಶರ ಮೊರೆ

ಈಶ್ವರಪ್ಪ- ಯಡಿಯೂರಪ್ಪ ಭಿನ್ನಮತ ಪರಿಹಾರಕ್ಕೆ ಮಠಾಧೀಶರ ಮೊರೆ
ಬೆಂಗಳೂರು , ಸೋಮವಾರ, 22 ಮೇ 2017 (16:24 IST)
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಿನ್ನಮತ ಶಮನಕ್ಕೆ ರಾಜ್ಯ ಬಿಜೆಪಿ ನಾಯಕರು ಮಠಾಧೀಶರ ಮೊರೆ ಹೋಗಿದ್ದಾರೆ.
 
ಮಾದಾರ ಚೆನ್ನಯ ಸ್ವಾಮಿಜಿ ಬಿಜೆಪಿ ಮುಖಂಡ ಆರ್.ಅಶೋಕ್ ನಿವಾಸಕ್ಕೆ ಭೇಟಿ ನೀಡಿದಾಗ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಭಿನ್ನಮತ ಶಮನಗೊಳಿಸಲು ಪ್ರಯತ್ನಿಸುವಂತೆ ಕೋರಿದ್ದಾರೆ ಎನ್ನಲಾಗುತ್ತಿದೆ.
 
ಉಭಯ ನಾಯಕರ ಭಿನ್ನಮತ ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವುದರಿಂದ ಮುಂಬರುವ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕರು ಸ್ವಾಮಿಜಿಯವರಿಗೆ ತಿಳಿಸಿದ್ದಾರೆ.
 
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮನವೊಲಿಸಲು ಪ್ರಯತ್ನಿಸುವುದಾಗಿ ಮಾದಾರ ಚೆನ್ನಯ್ಯ ಸ್ವಾಮಿಜಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೇಜ್ರಿವಾಲ್ ವಿರುದ್ಧ ಮತ್ತೊಂದು ಮಾನನಷ್ಟ ಮೊಖದ್ದಮೆ ದಾಖಲಿಸಿದ ಜೇಟ್ಲಿ