Webdunia - Bharat's app for daily news and videos

Install App

ಕ್ರಿಯಾ ಸಮಾಧಿ ಸಂಪ್ರದಾಯದಂತೆ ಗೌರಿಶಂಕರ ಸ್ವಾಮೀಜಿ ಅಂತಿಮ ಸಂಸ್ಕಾರ

Webdunia
ಗುರುವಾರ, 12 ಜನವರಿ 2017 (07:40 IST)
ನಿನ್ನೆ ಲಿಂಗೈಕ್ಷರಾದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಮಾಜಿ ಶಿಷ್ಯ  ಗೌರಿಶಂಕರ ಸ್ವಾಮೀಜಿ (71) ಅವರ ಅಂತ್ಯಕ್ರಿಯೆ ಇಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಗೊಲ್ಲ ಹಳ್ಳಿಯ ಜಂಗಮಮಠದಲ್ಲಿ ನಡೆಯಿಲಿದೆ.
 

 
ಕ್ರಿಯಾ ಸಮಾಧಿ ಸಂಪ್ರದಾಯದಂತೆ ಅವರ ಅಂತಿಮ ಸಂಸ್ಕಾರವನ್ನು ಮಾಡಲಾಗುತ್ತಿದೆ. ಇಂದು ನಸುಕಿನ ಜಾವ 5 ಗಂಟೆಗೆ ಸ್ವಾಮೀಜಿಗೆ ಸ್ನಾನ ಮಾಡಿಸಿ 4 ಗೋಡೆಯಿಂದ ನಿರ್ಮಿಸಿದ ಸಮಾಧಿಯಲ್ಲಿ ಕೂರಿಸಿ ಪೂಜೆ ಮಾಡಲಾಯಿತು. ಇಂದು ಸಂಜೆಯವರೆಗೂ ಪಾರ್ಥಿವ ಶರೀರದ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತಿದೆ. 
 
ಕಳೆದ ಕೆಲ ತಿಂಗಳಿಂದ ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸ್ವಾಮೀಜಿ ನಿನ್ನೆ ಮುಂಜಾನೆ ಬೆಂಗಳೂರಿನ ಕೇಂಪೇಗೌಡ ಆಸ್ಪತ್ರೆಯಲ್ಲಿ ಲಿಂಗೈಕ್ಷರಾಗಿದ್ದರು.
 
ಇವರು ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಕ್ಕಾಗಿ ಸಾಕಷ್ಟು ಹೋರಾಟ ನಡೆಸಿದ್ದರು. ಈ ಸಂಬಂಧ ಕೋರ್ಟ್ ಮೆಟ್ಟಿಲನ್ನು ಕೂಡ ಏರಿದ್ದರು. ಈ ಕುರಿತಂತೆ ತುಮಕೂರು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಹಲವು ಕಾರಣಗಳಿಂದ ಇವರನ್ನು ಮಠದಿಂದ ಹೊರಹಾಕಲಾಗುತ್ತಿತ್ತು. ಬಳಿಕ ಗುಬ್ಬಿ ತಾಲ್ಲೂಕಿನ ಗೊಲ್ಲಹಳ್ಳಿ ಬಳಿ ಸಿದ್ದಗಂಗಾ ಮಠ ಸ್ಥಾಪಿಸಿ ವಾಸವಾಗಿದ್ದರು. 
 
ಇತ್ತೀಚಿಗಷ್ಟೇ ಸಿದ್ಧಗಂಗಾ ಶ್ರೀಗಳನ್ನು ಭೇಟಿಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಕೋರ್ಟ್ ಅನುಮತಿ ಪಡೆದಿದ್ದರೂ ಶ್ರೀಗಳು ಇದಕ್ಕೆ ನಿರಾಕರಿಸಿದ್ದರು. ಕೊನೆಗಳಿಗೆಯಲ್ಲೂ ನನಗೆ ಪಟ್ಟ ಬೇಡ, ಗುರುಗಳು ಬೇಕು ಎಂದು ಕೊರಗುತ್ತ ಅವರು ಪ್ರಾಣ ಬಿಟ್ಟಿದ್ದು ಮಾತ್ರ ವಿಪರ್ಯಾಸವೇ ಸರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments