Select Your Language

Notifications

webdunia
webdunia
webdunia
webdunia

ಲೋನ್ ಆ್ಯಪ್ ಕಿರುಕುಳಕ್ಕೆ ಸ್ವರಾಜ್ ಆತ್ಮಹತ್ಯೆ

ಲೋನ್ ಆ್ಯಪ್ ಕಿರುಕುಳಕ್ಕೆ ಸ್ವರಾಜ್ ಆತ್ಮಹತ್ಯೆ
ದಕ್ಷಿಣ ಕನ್ನಡ , ಶನಿವಾರ, 2 ಸೆಪ್ಟಂಬರ್ 2023 (19:30 IST)
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ವರಾಜ್ ತನ್ನ ವಾಟ್ಸಾಪ್​ನಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದ. ಈ ಫೋಟೋವನ್ನು ಲೋನ್ ಆ್ಯಪ್​ನವರು ‘Baby for sale’ ಎಂದು ಎಡಿಟ್ ಮಾಡಿ ಸ್ವರಾಜ್​ ಸ್ನೇಹಿತರು, ಕಾಂಟ್ಯಾಕ್ಟ್ ಲಿಸ್ಟ್​ನಲ್ಲಿರುವವರಿಗೆ ಫಾರ್ವರ್ಡ್ ಮಾಡಿದ್ರು. ಈ ರೀತಿಯ ಬ್ಲ್ಯಾಕ್​​​​ಮೇಲ್ ತಡೆಯಲಾಗದೇ ಆಗಸ್ಟ್ 30ರಂದು 30 ಸಾವಿರ ರೂಪಾಯಿ ಕಟ್ಟಿದ್ದ. ಆದರೂ ಇನ್ನಷ್ಟು ಹಣ ಕೊಡಬೇಕೆಂದು ಆಗಸ್ಟ್ 31ರಂದು ಮಧ್ಯಾಹ್ನ 2 ಗಂಟೆಗೆ ಡೆಡ್ ಲೈನ್ ನೀಡಿಲಾಗಿತ್ತು. ಇದರಿಂದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ತಿಗಾಗಿ ಕಂದಮ್ಮನಿಗೆ ವಿಷವುಣಿಸಿದ ಮಲತಾಯ