Webdunia - Bharat's app for daily news and videos

Install App

ಮೊಬೈಲ್ ಗ್ರಾಹಕರಿಗೆ ಸಿಹಿಸುದ್ದಿ

Webdunia
ಶನಿವಾರ, 2 ಅಕ್ಟೋಬರ್ 2021 (20:53 IST)
ಮೊಬೈಲ್ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಸಿಮ್ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಸರ್ಕಾರ ಹೊಸ ನಿಯಮಗಳನ್ನು ಮಾಡಿದೆ. ಈ ಹೊಸ ನಿಯಮದ ಅಡಿಯಲ್ಲಿ, ಕೆಲವು ಗ್ರಾಹಕರು ಹೊಸ ಮೊಬೈಲ್ ಸಂಪರ್ಕವನ್ನು ಸುಲಭವಾಗಿ ಪಡೆಯಬಹುದು. ಇನ್ನು ಕೆಲ ಗ್ರಾಹಕರು ಇನ್ನು ಮುಂದೆ ಹೊಸ ಸಿಮ್ ಪಡೆಯಲು ಸಾಧ್ಯವಾಗುವುದಿಲ್ಲ.
 
ಸರ್ಕಾರದ ಹೊಸ ನಿಯಮಗಳ ಪ್ರಕಾರ, ಕಂಪನಿಯು 18 ವರ್ಷದೊಳಗಿನ ಗ್ರಾಹಕರಿಗೆ ಹೊಸ ಸಿಮ್ ಮಾರಾಟ ಮಾಡುವುದಿಲ್ಲ. ಮತ್ತೊಂದೆಡೆ, 18 ವರ್ಷಕ್ಕಿಂತ ಮೇಲ್ಪಟ್ಟ ಗ್ರಾಹಕರು ತಮ್ಮ ಹೊಸ ಸಿಮ್‌ಗಾಗಿ ಆಧಾರ್ ಅಥವಾ ಡಿಜಿಲಾಕರ್‌ನಲ್ಲಿ ಸಂಗ್ರಹವಾಗಿರುವ ಯಾವುದೇ ದಾಖಲೆಯನ್ನು ನೀಡಬಹುದು. ದೂರ ಸಂಪರ್ಕ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದೆ.
 
ಹೊಸ ಆದೇಶದ ಪ್ರಕಾರ, ಬಳಕೆದಾರರು ಹೊಸ ಮೊಬೈಲ್ ಸಂಪರ್ಕಕ್ಕಾಗಿ ಯುಐಡಿಎಐ ಆಧಾರ್ ಆಧಾರಿತ ಇ-ಕೆವೈಸಿ ಸೇವೆಯ ಮೂಲಕ ಪ್ರಮಾಣೀಕರಣಕ್ಕಾಗಿ ಕೇವಲ 1 ರೂಪಾಯಿ ಪಾವತಿಸಬೇಕಾಗುತ್ತದೆ.
 
ಟೆಲಿಕಾಂ ಇಲಾಖೆಯ ಹೊಸ ನಿಯಮಗಳ ಪ್ರಕಾರ, ಈಗ ಕಂಪನಿಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಳಕೆದಾರರಿಗೆ ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಲು ಸಾಧ್ಯವಿಲ್ಲ. ಇದಲ್ಲದೆ ವ್ಯಕ್ತಿಯು ಮಾನಸಿಕ ಅಸ್ವಸ್ಥನಾಗಿದ್ದರೆ, ಅಂತಹ ವ್ಯಕ್ತಿಗೆ ಹೊಸ ಸಿಮ್ ಕಾರ್ಡ್ ನೀಡಲಾಗುವುದಿಲ್ಲ. ಈ ನಿಯಮಗಳನ್ನು ಉಲ್ಲಂಘಿಸಿದರೆ, ಸಿಮ್ ಮಾರಾಟ ಮಾಡಿದ ಟೆಲಿಕಾಂ ಕಂಪನಿಯನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗುತ್ತದೆ.
 
ಪ್ರಿಪೇಯ್ಡ್ ಅನ್ನು ಪೋಸ್ಟ್ ಪೇಯ್ಡ್ ಆಗಿ ಪರಿವರ್ತಿಸಲು ಹೊಸ ಒನ್ ಟೈಮ್ ಪಾಸ್ ವರ್ಡ್ ಆಧಾರಿತ ಪ್ರಕ್ರಿಯೆಗೆ ಸರ್ಕಾರ ಆದೇಶ ಹೊರಡಿಸಿದೆ. ಹೊಸ ನಿಯಮದ ಪ್ರಕಾರ, ಯುಐಡಿಎಐ ಆಧಾರಿತ ಪರಿಶೀಲನೆಯ ಮೂಲಕ ಗ್ರಾಹಕರು ತಮ್ಮ ಮನೆಯಲ್ಲೇ ಸಿಮ್ ಪಡೆಯಬಹುದು. ಪೋರ್ಟಲ್ ಆಧಾರಿತ ಪ್ರಕ್ರಿಯೆಯ ಮೂಲಕ ಗ್ರಾಹಕರಿಗೆ ಮೊಬೈಲ್ ಸಂಪರ್ಕವನ್ನು ನೀಡಲಾಗುವುದು. ಮನೆಯಲ್ಲಿಯೇ ಕುಳಿತು ಗ್ರಾಹಕರು ಹೊಸ ಸಿಮ್ ಗೆ ಅರ್ಜಿ ಸಲ್ಲಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments