Webdunia - Bharat's app for daily news and videos

Install App

ಕುದುರೆ ಡೆಲಿವರಿ ಬಾಯ್ ಪತ್ತೆ ಹಚ್ಚಿದ ಸ್ವಿಗಿ...!!!

Webdunia
ಮಂಗಳವಾರ, 12 ಜುಲೈ 2022 (17:19 IST)
ಮಹಾನಗರಿ ಮುಂಬೈ ಮಳೆಯಂದು ಸ್ವಿಗ್ಗಿ ಬ್ಯಾಗ್ ಹೊತ್ತುಕೊಂಡು ಕುದುರೆ ಸವಾರಿ ಮಾಡುತ್ತಿದ್ದ ವ್ಯಕ್ತಿಯನ್ನು ಸ್ವಿಗ್ಗಿ ಸಂಸ್ಥೆ ಕೊನೆಗೂ ಕಂಡು ಹಿಡಿದಿದೆ. ತೀವ್ರ ಮಳೆಯ ಸಮಯದಲ್ಲಿ ಆಹಾರವನ್ನು ತಲುಪಿಸುವ ವಿನೂತನ ವಿಧಾನ ಕಂಡುಕೊಂಡಿದ್ದ ಡೆಲಿವರಿ ಬಾಯ್ ನನ್ನು ಕಂಡುಹಿಡಿಯಲು ಸ್ವಿಗ್ಗಿ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭಿಸಿತ್ತು.
ಸ್ವಿಗ್ಗಿ ಆಹಾರ ವಿತರಣೆಯ ಬ್ಯಾಗ್ ಅನ್ನು ಧರಿಸಿ ಕುದುರೆಯೇರಿ ಹೊರಟಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲಾಗಿದೆ. ಆ ವ್ಯಕ್ತಿಯನ್ನು 17 ವರ್ಷ ವಯಸ್ಸಿನ ಸುಶಾಂತ್ ಎನ್ನಲಾಗಿದೆ. ಈತ ಕುದುರೆ ಕೌಟೂರಿಯರ್ ಆಗಿದ್ದು, ಆತ ಡೆಲಿವರಿ ಬಾಯ್ ಅಲ್ಲ ಎಂದು ತಿಳಿದುಬಂದಿದೆ. ಕುದುರೆಯೇರಿ ಹೋಗುತ್ತಿದ್ದ ಈ ದೃಶ್ಯವನ್ನು ಅವಿ ಎಂಬಾತ ಫೋಟೋ ಕ್ಲಿಕ್ಕಿಸಿದ್ದ.
 
ಸ್ವಿಗ್ಗಿ ಸಂಸ್ಥೆಯ ಬ್ಯಾಗ್ ಅನ್ನು ಬೆನ್ನಿಗೆ ಹಾಕಿಕೊಂಡು ಕುದುರೆ ಮೇಲೆ ಸವಾರಿ ಮಾಡಿದಾತನನ್ನು ಪತ್ತೆಹಚ್ಚುವವರಿಗೆ 5,000 ರೂ. ಬಹುಮಾನ ನೀಡಲಾಗುವುದು ಎಂದು ಘೋಷಿಸಿತ್ತು. ಇದೀಗ ಆ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿದೆ. ವಿಡಿಯೋ ಮಾಡಿದವರಿಂದಲೇ ಸ್ವಿಗ್ಗಿ ಮಾಹಿತಿ ಪಡೆದಿದೆ.
 
ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಜನಪ್ರಿಯವಾಗಿರುವ 17 ವರ್ಷದ ಸುಶಾಂತ್ ಮುಂಬೈನ ಸ್ಟೇಬಲ್‌ನಲ್ಲಿ ಕೌಟೂರಿಯರ್ ಆಗಿ ಕೆಲಸ ಮಾಡುತ್ತಾನೆ. ಆತ ಮದುವೆಯ ಮೆರವಣಿಗೆಗೆ ಕುದುರೆಯನ್ನು ಕರೆದೊಯ್ದು ಹಿಂತಿರುಗುತ್ತಿದ್ದ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments