ಟ್ಯಾಬ್ಲೆಟ್ ಮರೆತುಹೋದ ಪ್ರಯಾಣಿಕ ವಿಮಾನ ಸಿಬ್ಬಂದಿ ಬಂಧನ

Webdunia
ಮಂಗಳವಾರ, 15 ಫೆಬ್ರವರಿ 2022 (15:54 IST)
ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟುಹೋಗಿದ್ದ ಟ್ಯಾಬ್ಲೆಟ್ ಕಂಪ್ಯೂಟರ್ ನ್ನು ಕಳ್ಳತನ ಮಾಡಿದ ಆರೋಪದ ಮೇಲೆ ವಿಮಾನ ನಿಲ್ದಾಣ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಮೊನ್ನೆ ಫೆಬ್ರವರಿ 10ರಂದು ಜೈಪುರದಿಂದ ಬೆಂಗಳೂರಿಗೆ ಬಂದಿಳಿದ ಗೋ ಫಸ್ಟ್ ವಿಮಾನದಲ್ಲಿ ಪ್ರಯಾಣಿಕ ಟ್ಯಾಬ್ ನ್ನು ಬಿಟ್ಟುಹೋಗಿದ್ದರು.
ಬಂಧಿತ ಸಿಬ್ಬಂದಿಯನ್ನು ಮುರಳಿ ಎಂದು ಗುರುತಿಸಲಾಗಿದ್ದು ಈತ ನಿಲ್ದಾಣದ ಸೇವೆ ಒದಗಿಸುವ ವಿಭಾಗ CELEBIಯಲ್ಲಿ ಕೆಲಸ ಮಾಡುತ್ತಿದ್ದರು. ಮೊನ್ನೆ ಫೆಬ್ರವರಿ 10ರಂದು ಗೋ ಫಸ್ಟ್ ವಿಮಾನ ಸಂಖ್ಯೆ ಜಿ8 807 ಬೆಳಗ್ಗೆ 6.40ಕ್ಕೆ ಬೆಂಗಳೂರು ಬಂದು ತಲುಪಿತ್ತು. ವಿಮಾನದಿಂದ ಇಳಿದು ಹೋದ ಮೇಲೆ ಪ್ರಯಾಣಿಕನಿಗೆ ತಾನು ವಿಮಾನದೊಳಗೆ ಟ್ಯಾಬ್ಲೆಟ್ ಬಿಟ್ಟು ಬಂದಿದ್ದೇನೆ ಎಂದು ಗೊತ್ತಾಯಿತು. ವಿಮಾನ ಸಿಬ್ಬಂದಿಗೆ ತಿಳಿಸಿದರು. ನಂತರ ಏರ್ ಪೋರ್ಟ್ ಸ್ಟೇಷನ್ ನಲ್ಲಿ ಕೇಸು ದಾಖಲಾಗಿತ್ತು. ಪೊಲೀಸರು ಕೇಂಗ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ ಎಫ್ )ಗೆ ಮಾಹಿತಿ ನೀಡಿದ್ದರು.
 
ಸಿಐಎಸ್ ಎಫ್ ಅಂದೇ ಎಲ್ಲಾ ಸಿಬ್ಬಂದಿಯನ್ನು ತಪಾಸಣೆ ಮಾಡಿದಾಗ ಮುರಳಿ ಎಂಬುವವರು ಸಿಕ್ಕಿಹಾಕಿಕೊಂಡರು. ಪ್ರಯಾಣಿಕರು ವಿಮಾನದೊಳಗೆ ಆಗಾಗ ಗ್ಯಾಜೆಟ್ ಗಳನ್ನು ಬಿಟ್ಟುಹೋಗುತ್ತಾರೆ. ಪ್ರಯಾಣಿಕರು ವಸ್ತುಗಳನ್ನು ಬಿಟ್ಟುಹೋದಾಗ ಅದರ ಬಗ್ಗೆ ಕೂಡಲೇ ವಿಮಾನ ಸಿಬ್ಬಂದಿಗೆ ತಿಳಿಸಿ ಪ್ರಯಾಣಿಕರಿಗೆ ಸುರಕ್ಷಿತವಾಗಿ ತಲುಪಿಸುವುದು ಸಿಬ್ಬಂದಿಗಳ ಕರ್ತವ್ಯವಾಗಿರುತ್ತದೆ. ವಿಮಾನ ನಿಲ್ದಾಣದ ಲಾಸ್ಟ್ ಅಂಡ್ ಫೌಂಡ್ ವಿಭಾಗದಲ್ಲಿ ಇರಿಸಬೇಕು.
 
ಪ್ರಯಾಣಿಕ ಬಿಟ್ಟುಹೋಗಿದ್ದ ಸ್ಯಾಮ್ ಸಂಗ್ ಟ್ಯಾಬ್ಲೆಟ್ 15 ಸಾವಿರ ರೂಪಾಯಿ ಬೆಲೆಬಾಳುವದ್ದಾಗಿದೆ. ಇದು ಕಳ್ಳತನದ ಪ್ರಕರಣವಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 380 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾವು ಆತನನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಯು ಪ್ರಯಾಣಿಕನಿಗೆ ತಿಳಿಸಿ ಅವರು ಬಂದು ತಮ್ಮ ವಸ್ತುವನ್ನು ತೆಗೆದುಕೊಂಡು ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments