Webdunia - Bharat's app for daily news and videos

Install App

ತಹಶೀಲ್ದಾರ್ ಹತ್ಯೆಗೆ ಯತ್ನಿಸಿದ ಜೆಸಿಬಿ ಚಾಲಕನ ಬಂಧನ

Webdunia
ಶುಕ್ರವಾರ, 3 ಮಾರ್ಚ್ 2017 (07:38 IST)
ತಹಶೀಲ್ದಾರ್ ಹತ್ಯೆಗೆ ಯತ್ನಿಸಿದ್ದ ಜೆಸಿಬಿ ಚಾಲಕನನ್ನು ಬಂಧಿಸಲಾಗಿದೆ.

ಗಣೇಶ್‌ ಬಂಧಿತ ಆರೋಪಿ. ಘಟನೆ ಕುರಿತು ಕನಕಪುರ ತಹಶೀಲ್ದಾರ್‌ ಆರ್. ಯೋಗಾನಂದ ಅವರು ಹಾರೋಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ಆರೋಪಿಯನ್ನು ಬಂಧಿಸಲಾಯಿತು.
 
ರಾಮನಗರದ ತಟ್ಟೆಕೆರೆ ಗ್ರಾಮದ ಜಮೀನೊಂದರಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಕುರಿತು ಖಚಿತ ಮಾಹಿತಿ ಪಡೆದ ಕನಕಪುರ ತಹಶೀಲ್ದಾರ್ ಯೋಗಾನಂದ ತಮ್ಮ ಸಿಬ್ಬಂದಿ ಜತೆಯಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಜೆಸಿಬಿ ಚಾಲಕ, ಯೋಗಾನಂದ ಅವರ ಕಾರ್‌ಗೆ ಜೆಸಿಬಿ ಗುದ್ದಿಸಿ ಅವರ ಕೊಲೆಗೆ ಯತ್ನಿಸಿದ್ದ. ತಕ್ಷಣ ಕಾರ್‌ನಿಂದ ಹಾರಿದ ತಹಶೀಲ್ದಾರ್ ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದರು. ಬಳಿಕ ಎಸಿಬಿ ಚಾಲಕನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ. ತಕ್ಷಣ ಆತ ಸ್ಥಳದಿಂದ ಪರಾರಿಯಾಗಿದ್ದ.
 
ಮರಳು ಫಿಲ್ಟರ್‌ ಕಾರ್ಯವು ನಡೆಯುತ್ತಿದ್ದ ಜಮೀನು ಸ್ಥಳೀಯ ಟಿಎಪಿಸಿಎಂಎಸ್‌ನ ಉಪಾಧ್ಯಕ್ಷ ನಂಜೇಗೌಡ ಎಂಬುವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments