Select Your Language

Notifications

webdunia
webdunia
webdunia
webdunia

ಶಾಸಕ ಮುನಿರತ್ನ ವಿರುದ್ಧ ಕ್ರಮಕ್ಕೆ ಸಿಎಂಗೆ ದೂರು

ಶಾಸಕ ಮುನಿರತ್ನ ವಿರುದ್ಧ ಕ್ರಮಕ್ಕೆ ಸಿಎಂಗೆ ದೂರು
ಬೆಂಗಳೂರು , ಸೋಮವಾರ, 5 ಜೂನ್ 2017 (12:41 IST)
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಮುನಿರತ್ನ ವಿರುದ್ಧ ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಸದಸ್ಯರು ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದಾರೆ.
 
ವಿಧಾನಸೌಧದ ಪ್ರವೇಶ ದ್ವಾರದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಬಿಬಿಎಂಪಿ ಸದಸ್ಯೆಯರಾದ ಜೆಡಿಎಸ್‌ನ ಮಂಜುಳಾ ನಾರಾಯಣಸ್ವಾಮಿ,  
 
ಅನಗತ್ಯವಾಗಿ ಬಿಬಿಎಂಪಿ ಯೋಜನೆ ಜಾರಿಯಲ್ಲಿ ಹಸ್ತಕ್ಷೇಪ ಮಾಡುವುದಲ್ಲದೇ ಮಹಿಳೆಯರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆ. ಇತ್ತೀಚೆಗೆ ಮಹಿಳಾ ಕಾರ್ಪೋರೇಟರ್ ಮೇಲೆ ನಡೆದ ಹಲ್ಲೆಯೇ ಸಾಕ್ಷಿಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
ಶಾಸಕ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮಹಿಳೆ ಸದಸ್ಯರು ಸಿಎಂ ಸಿದ್ದರಾಮಯ್ಯನವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್ಆಡಿ 2.5 ಲಕ್ಷ ರೂಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿಭಾಗವಹಿಸಲು  ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನ ಸೌಧದ ಮುಂದೆ ರೆಬಲ್ ಸ್ಟಾರ್ ಅಂಬರೀಷ್ ವಿರುದ್ಧ ಪ್ರತಿಭಟನೆ