Publish Date: Sun, 17 Sep 2023 (09:43 IST)
Updated Date: Sun, 17 Sep 2023 (10:37 IST)
ಬೆಂಗಳೂರು : ಗಣೇಶ ಹಬ್ಬಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಡಿಸಿ, ಸಿಇಓಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಹೈಅಲರ್ಟ್ ಇರುವಂತೆ ಸಂದೇಶ ಕೊಟ್ಟರು. ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಪರಿಸರ ಹಾನಿಯಾಗದಂತೆ ಹಬ್ಬ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.