ಟೆಕ್ಕಿಗಳು ಹಾಗೂ ಉದ್ಯಮಿಗಳ ಮಕ್ಕಳಿಗೆ ಮಾದಕ ವಸ್ತು ಮಾರಾಟ

Webdunia
ಶುಕ್ರವಾರ, 8 ಅಕ್ಟೋಬರ್ 2021 (20:47 IST)
ಕೊಡಿಗೇಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು,
ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಇಬ್ಬರನ್ನು ಮಾದಕ ನಿಗ್ರಹ ದಳದ (ಸಿಸಿಬಿ) ಪೆÇಲೀಸರು ಬಂಧಿಸಿದ್ದಾರೆ. 
ನೈಜೀರಿಯಾ ಮೂಲದ ಅಗುಂಟಾ ಚುಕುವಾಕಾ ಡ್ಯಾನಿಲ್(24) ಮತ್ತು ಕಾವಲ್ ಭೈರಸಂದ್ರದ ಮೊಹಮ್ಮದ್ ಜೈದ್(30) ಬಂಧಿತರು. ಮತ್ತೊಬ್ಬ ಅರೋಪಿ ಲಕ್ಕಸಂದ್ರದ ಮೊಹಮ್ಮದ್ ಅಸ್ಲಾಂ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಮುಂದುವರಿದಿದೆ. ಬಂಧಿತ ಆರೋಪಿಗಳಿಂದ ಮೂರು ಲಕ್ಷ ರೂ. ಮೌಲ್ಯದ 46 ಎಂಡಿಎಂಎ ಎಕ್ಸಟೆಸಿ ಮಾತ್ರೆಗಳು, ಎರಡು ಮೊಬೈಲ್, ಕೃತ್ಯಕ್ಕೆ ಬಳಸುತ್ತಿದ್ದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೆÇಲೀಸರು ಹೇಳಿದರು.
ಆರೋಪಿಗಳು ಇತ್ತೀಚೆಗೆ ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯ ಸಹಕಾರ ನಗರಕ್ಕೆ ದ್ವಿಚಕ್ರ ವಾಹನದಲ್ಲಿ ಬಂದು ವಿದ್ಯಾರ್ಥಿಗಳು, ಟೆಕ್ಕಿಗಳು ಹಾಗೂ ಕೆಲವು ಉದ್ಯಮಿಗಳ ಮಕ್ಕಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೆÇಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. 
ಆರೋಪಿಗಳ ಪೈಕಿ ನೆಜೀರಿಯಾ ಪ್ರಜೆ ಅಗುಂಟಾ ಚುಕುವಾಕಾ ಡ್ಯಾನಿಲ್, ಕಳೆದ ಏಪ್ರಿಲ್‍ನಲ್ಲಿ ಕೊಕೇನ್ ಮಾರಾಟದ ವೇಳೆ ಕೊತ್ತನೂರು ಠಾಣೆ ಪೆÇಲೀಸರಿಗೆ ಸಿಕ್ಕಿಬಿದ್ದು, ಜೈಲು ಸೇರಿದ್ದ. ಇದೀಗ ಜೈಲಿನಿಂದ ಬಿಡುಗಡೆಯಾಗಿ ಬಂದು ಮತ್ತೆ ಅದೇ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾನೆ. ದೆಹಲಿಯಲ್ಲಿರುವ ತನ್ನ ದೇಶದ ಪ್ರಜೆ ಮೂಲಕ ಮಾದಕ ವಸ್ತು ತರಿಸಿ ತನ್ನ ಸಹಚರರ ಜತೆ ಸೇರಿಕೊಂಡು ನಗರದಲ್ಲಿ ಮಾರಾಟ ಮಾಡತ್ತಿದ್ದ ಎಂದು ಪೆÇಲೀಸರು ಹೇಳಿದರು.
ಸದ್ಯ ಆರೋಪಿಗಳ ವಿರುದ್ಧ ಕೊಡಿಗೇಹಳ್ಳಿ ಪೆÇಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೆÇಲೀಸರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ