Webdunia - Bharat's app for daily news and videos

Install App

ಮೇಕೆದಾಟು ಯೋಜನೆ ಕುರಿತು ತಮಿಳುನಾಡು ರಾಜಕೀಯ ಸ್ಟಂಟ್: ಸಿಎಂ ಬೊಮ್ಮಾಯಿ

Webdunia
ಮಂಗಳವಾರ, 14 ಜೂನ್ 2022 (18:06 IST)
ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ ಮೇಲ್ವಿಚಾರಣಾ ಸಮಿತಿ ಈಗಾಗಲೇ ಹಲವಾರು ಸಭೆ ನಡೆಸಿದ್ದು, ಅಂತಿಮ ಜೂನ್ 16 ರಂದು ಅಂತಿಮ ಸಭೆ ನಡೆಯಲಿದೆ ಎಂದರು.
ಕಾವೇರಿ ವಿಷಯದ ಮೇಲೆ ಈ ರೀತಿ ಹಲವಾರು ವರ್ಷಗಳಿಂದ ತಮಿಳುನಾಡು ಮಾಡಿದ್ದಾರೆ. ಇದು ಅದರ  ಭಾಗವಷ್ಟೇ. ಇದು ಕಾನೂನಿನ ಚೌಕಟ್ಟಿನಲ್ಲಿ ನಿಲ್ಲುವುದೂ ಇಲ್ಲ. ಕಾನೂನು ಬಾಹಿರ ಪತ್ರವನ್ನು ಕೇಂದ್ರ ಖಂಡಿತವಾಗಿಯೂ ಪರಿಗಣಿಸುವುದಿಲ್ಲ. ನ್ಯಾಯ ಸಿಗುವ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಅವರು ತಿಳಿಸಿದರು. 
ಜೂನ್ 16 ರಂದು ತಮಿಳುನಾಡು, ಪುದುಚೇರಿ, ಕರ್ನಾಟಕ ಹಾಗೂ ಕೇರಳ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂಗೆ ಜವಾಬ್ಧಾರಿ ಇದ್ದಿದ್ದರೆ ಅತಿವೃಷ್ಟಿಗೆ ಪರಿಹಾರ ಒದಗಿಸುತ್ತಿದ್ದರು: ಆರ್ ಅಶೋಕ

ಕೊನೆಗೂ ಹುಷಾರಾದ್ರು ಮಲ್ಲಿಕಾರ್ಜುನ ಖರ್ಗೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಸರಾ ಪಾಸ್ ನಲ್ಲಿ ಗೋಲ್ ಮಾಲ್: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಗಂಭೀರ ಆರೋಪ

ನೊಬೆಲ್ ಪ್ರಶಸ್ತಿಗಾಗಿ ಗೋಗರೆಯುತ್ತಿರುವ ಡೊನಾಲ್ಡ್ ಟ್ರಂಪ್: ಪ್ರಶಸ್ತಿಗಾಗಿ ಹೀಗೂ ಹೇಳ್ತಾರಾ

ಮುಂದಿನ ಸುದ್ದಿ
Show comments